24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಮೊಗ್ರು : ತೋಟಗಾರಿಕೆ ಇಲಾಖೆ ಬೆಳ್ತಂಗಡಿ, ಬಂದಾರು ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ, ಇದರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ 10 ರಂದು ಮುಗೇರಡ್ಕ ಮೂವರು ದೈವಸ್ಥಾನದ ವಠಾರದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ವಿಟ್ಲ ಪ್ರಾದೇಶಿಕ ಕೇಂದ್ರ ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳಾದ ಡಾ.ಭವಿಷ್ಯ ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಹಾಗೂ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹಾವೀರ ರವರು ಇಲಾಖೆಯ ಯೋಜನೆಗಳ ಸಮಗ್ರ ಮಾಹಿತಿ ನೀಡಿ ಸಂಧರ್ಬೋಚಿತವಾಗಿ ಮಾತನಾಡಿದರು.

ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪವತಿ ಬರಮೇಲು, ಬಂದಾರು ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಪರಮೇಶ್ವರಿ ಕೆ ಗೌಡ, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಮಾಜಿ ಉಪಾಧ್ಯಕ್ಷರು ಹಾಲಿ ಸದಸ್ಯ ಗಂಗಾಧರ ಪೂಜಾರಿ, ಮುಗೇರಡ್ಕ ಮೂವರು ದೈವಸ್ಥಾನದ ಆಡಳಿತ ಮೊಕ್ತೇಸರರಾದ ರಾಮ್ಮಣ್ಣ ಗೌಡ ದೇವಸ, ಮನೋಹರ ಗೌಡ ಅಂತರ, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಶೀಲಾವತಿ ಬಾಬು ಗೌಡ, ಬೆಳ್ತಂಗಡಿ ತೋಟಗಾರಿಕೆ ಇಲಾಖಾ ಸಹಾಯಕ ಅಧಿಕಾರಿಗಳಾದ ಮಲ್ಲಿನಾಥ ಬಿರಾದಾರ್, ಭೀಮರಾಯ ಸೊಡ್ಡಗಿ ಉಪಸ್ಥಿತರಿದ್ದರು.


ಹೆಚ್ಚಿನ ರೈತರು ತರಬೇತಿ ಶಿಬಿರ ಮಾಹಿತಿ ಪಡೆದುಕೊಂಡರು. ವಕೀಲರಾದ ಉದಯ ಬಿ ಕೆ ಸಹಕರಿಸಿದರು, ಬಂದಾರು ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಬಂದಾರು ಪಂಚಾಯತ್ ಸದಸ್ಯ ಗಂಗಾಧರ ಪೂಜಾರಿ ಧನ್ಯವಾದವಿತ್ತರು.

Related posts

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!