ಬೆಳ್ತಂಗಡಿ: ಗೋವಾದಲ್ಲಿ ಜರಗಿದ ಯೂತ್ ಗೇಮ್ಸ್ ಆಲ್ ಇಂಡಿಯಾ ಚಾಂಪಿಯನ್ ಶಿಪ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿ ನಿಸಾರ್ ಪ್ರತಿನಿಧಿಸಿದ ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆದು ನ.28ರಂದು ನೇಪಾಳದಲ್ಲಿ ಜರಗಲಿರುವ ಅಂತರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿರುತ್ತದೆ.
ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ವೃಂದ, ಶಾರೀರಿಕ ನಿರ್ದೇಶಕರು ಅಭಿನಂದಿಸಿದ್ದಾರೆ.













