26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

ಬೆಳ್ತಂಗಡಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ ಭಾಗವಹಿಸಿದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಜನಕಲ್ಯಾಣ ಮರೆತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸುವ ಸದಾವಕಾಶ ಬಂದೊದಗಿದ್ದು ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನು ದಾಖಲೆಯ ಮತಗಳ ಅಂತರಗಳಿಂದ ಆಶೀರ್ವದಿಸಬೇಕೆಂದು ಕಿಶೋರ್ ಕುಮಾರ್ ಅವರು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಬಂಗಾರು ಹನುಮಂತು, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ , ರಾಮುಲು , ಅರಗ ಜ್ಞಾನೇಂದ್ರ , ಶಾಸಕ ಡಾ. ಎಂ ಚಂದ್ರಪ್ಪ , ರಾಜ್ಯ ಕಾರ್ಯದರ್ಶಿ ದಿವಾಕರ್, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು -ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ :

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya
error: Content is protected !!