24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

ಬೆಳ್ತಂಗಡಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ ಭಾಗವಹಿಸಿದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಜನಕಲ್ಯಾಣ ಮರೆತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸುವ ಸದಾವಕಾಶ ಬಂದೊದಗಿದ್ದು ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನು ದಾಖಲೆಯ ಮತಗಳ ಅಂತರಗಳಿಂದ ಆಶೀರ್ವದಿಸಬೇಕೆಂದು ಕಿಶೋರ್ ಕುಮಾರ್ ಅವರು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಬಂಗಾರು ಹನುಮಂತು, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ , ರಾಮುಲು , ಅರಗ ಜ್ಞಾನೇಂದ್ರ , ಶಾಸಕ ಡಾ. ಎಂ ಚಂದ್ರಪ್ಪ , ರಾಜ್ಯ ಕಾರ್ಯದರ್ಶಿ ದಿವಾಕರ್, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಸಾಧನೆ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya
error: Content is protected !!