May 6, 2026
Uncategorized

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

ಸಂಡೂರು : ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಅಂಬೆಗಾಲಿಡುವ ಕೂಸು ಎನ್ನುವ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶ ಪಡಿಸಿರುವುದು ಎಂದು ತಿರುಗೇಟು ನೀಡಿದ್ದಾರೆ.

ಹಗರಣ, ಮತಾಂಧ ಶಕ್ತಿಗಳ ಓಲೈಕೆಯ ಮೂಲಕ ರಾಜ್ಯದ ಜನತೆಯ ರಕ್ತ ಹೀರುತ್ತಿರುವ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರದ ರಾಕ್ಷಸಿ ಮನೋಭಾವವನ್ನು ನಿಯಂತ್ರಿಸಲು ಶ್ರೀ ಕೃಷ್ಣನ ಚಿಂತನೆಗಳ ಅಗತ್ಯವಿದೆ. ಬಿಜೆಪಿ ರಾಜ್ಯಾದ್ಯಕ್ಷರನ್ನು ಅಂಬೆಗಾಲಿಡುವ ಕೂಸು ಎಂದಿರುವ ಸಿದ್ಧರಾಮಯ್ಯ ಅವರು ಶ್ರೀ ಕೃಷ್ಣನ ಬಾಲ್ಯದಲ್ಲಿ ಪೂತನಿ, ಶಕಟಾಸುರ,ತೃಣಾವರ್ತರಂತಹ ಅಸುರೀ ಶಕ್ತಿಗಳನ್ನು ಅಂಬೆಗಾಲಿಡುತ್ತಲೇ ಧಮನಿಸಿರುವುದು ಎನ್ನುವುದನ್ನು ಮರಿಯಬಾರದು‌. ರಾಜ್ಯದಲ್ಲಿ ಕಾಂಗ್ರೆಸ್ ನಡೆಸುವ ದುಷ್ಕೃತ್ಯಗಳನ್ನು ನಿಯಂತ್ರಿಸಲು ಅಂಬೆಗಾಡುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಸೂಕ್ತ ವ್ಯಕ್ತಿ ಎಂದು ಹೇಳಿದ್ದಾರೆ.

ಮತಾಂಧರ ಮತ ಬ್ಯಾಂಕ್ ರಾಜಕೀಯಕ್ಕೆ ಹಿಂದೂ ಸಮಾಜದ ಮೇಲೆ ರಾಕ್ಷಸರಂತೆ ಎರಗುವ ಕಾಂಗ್ರೆಸಿನ ವಿರುದ್ಧ ಇಡೀ ಸಮಾಜ ಒಗ್ಗಟ್ಟಿನಿಂದ ನಿಲ್ಲಲಿದೆ.ಹಿಂದೂ ಸಮಾಜದ ಭೂಮಿಯನ್ನು ವಕ್ಫ್ ಬೋರ್ಡಿಗೆ ಹಂಚುತ್ತಿರುವ ಸರಕಾರದ ಅವನತಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಾವೆಲ್ಲರೂ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಗುಡುಗಿದ್ದಾರೆ.

Related posts

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya
error: Content is protected !!