27 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

ಸಂಡೂರು : ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಅಂಬೆಗಾಲಿಡುವ ಕೂಸು ಎನ್ನುವ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶ ಪಡಿಸಿರುವುದು ಎಂದು ತಿರುಗೇಟು ನೀಡಿದ್ದಾರೆ.

ಹಗರಣ, ಮತಾಂಧ ಶಕ್ತಿಗಳ ಓಲೈಕೆಯ ಮೂಲಕ ರಾಜ್ಯದ ಜನತೆಯ ರಕ್ತ ಹೀರುತ್ತಿರುವ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರದ ರಾಕ್ಷಸಿ ಮನೋಭಾವವನ್ನು ನಿಯಂತ್ರಿಸಲು ಶ್ರೀ ಕೃಷ್ಣನ ಚಿಂತನೆಗಳ ಅಗತ್ಯವಿದೆ. ಬಿಜೆಪಿ ರಾಜ್ಯಾದ್ಯಕ್ಷರನ್ನು ಅಂಬೆಗಾಲಿಡುವ ಕೂಸು ಎಂದಿರುವ ಸಿದ್ಧರಾಮಯ್ಯ ಅವರು ಶ್ರೀ ಕೃಷ್ಣನ ಬಾಲ್ಯದಲ್ಲಿ ಪೂತನಿ, ಶಕಟಾಸುರ,ತೃಣಾವರ್ತರಂತಹ ಅಸುರೀ ಶಕ್ತಿಗಳನ್ನು ಅಂಬೆಗಾಲಿಡುತ್ತಲೇ ಧಮನಿಸಿರುವುದು ಎನ್ನುವುದನ್ನು ಮರಿಯಬಾರದು‌. ರಾಜ್ಯದಲ್ಲಿ ಕಾಂಗ್ರೆಸ್ ನಡೆಸುವ ದುಷ್ಕೃತ್ಯಗಳನ್ನು ನಿಯಂತ್ರಿಸಲು ಅಂಬೆಗಾಡುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಸೂಕ್ತ ವ್ಯಕ್ತಿ ಎಂದು ಹೇಳಿದ್ದಾರೆ.

ಮತಾಂಧರ ಮತ ಬ್ಯಾಂಕ್ ರಾಜಕೀಯಕ್ಕೆ ಹಿಂದೂ ಸಮಾಜದ ಮೇಲೆ ರಾಕ್ಷಸರಂತೆ ಎರಗುವ ಕಾಂಗ್ರೆಸಿನ ವಿರುದ್ಧ ಇಡೀ ಸಮಾಜ ಒಗ್ಗಟ್ಟಿನಿಂದ ನಿಲ್ಲಲಿದೆ.ಹಿಂದೂ ಸಮಾಜದ ಭೂಮಿಯನ್ನು ವಕ್ಫ್ ಬೋರ್ಡಿಗೆ ಹಂಚುತ್ತಿರುವ ಸರಕಾರದ ಅವನತಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಾವೆಲ್ಲರೂ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಗುಡುಗಿದ್ದಾರೆ.

Related posts

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ ಅಂಟೆಮಜಲುಓಬಯ್ಯ ಮಲೆಕುಡಿಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!