28 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

ಸಂಡೂರು : ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಅಂಬೆಗಾಲಿಡುವ ಕೂಸು ಎನ್ನುವ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶ ಪಡಿಸಿರುವುದು ಎಂದು ತಿರುಗೇಟು ನೀಡಿದ್ದಾರೆ.

ಹಗರಣ, ಮತಾಂಧ ಶಕ್ತಿಗಳ ಓಲೈಕೆಯ ಮೂಲಕ ರಾಜ್ಯದ ಜನತೆಯ ರಕ್ತ ಹೀರುತ್ತಿರುವ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರದ ರಾಕ್ಷಸಿ ಮನೋಭಾವವನ್ನು ನಿಯಂತ್ರಿಸಲು ಶ್ರೀ ಕೃಷ್ಣನ ಚಿಂತನೆಗಳ ಅಗತ್ಯವಿದೆ. ಬಿಜೆಪಿ ರಾಜ್ಯಾದ್ಯಕ್ಷರನ್ನು ಅಂಬೆಗಾಲಿಡುವ ಕೂಸು ಎಂದಿರುವ ಸಿದ್ಧರಾಮಯ್ಯ ಅವರು ಶ್ರೀ ಕೃಷ್ಣನ ಬಾಲ್ಯದಲ್ಲಿ ಪೂತನಿ, ಶಕಟಾಸುರ,ತೃಣಾವರ್ತರಂತಹ ಅಸುರೀ ಶಕ್ತಿಗಳನ್ನು ಅಂಬೆಗಾಲಿಡುತ್ತಲೇ ಧಮನಿಸಿರುವುದು ಎನ್ನುವುದನ್ನು ಮರಿಯಬಾರದು‌. ರಾಜ್ಯದಲ್ಲಿ ಕಾಂಗ್ರೆಸ್ ನಡೆಸುವ ದುಷ್ಕೃತ್ಯಗಳನ್ನು ನಿಯಂತ್ರಿಸಲು ಅಂಬೆಗಾಡುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಸೂಕ್ತ ವ್ಯಕ್ತಿ ಎಂದು ಹೇಳಿದ್ದಾರೆ.

ಮತಾಂಧರ ಮತ ಬ್ಯಾಂಕ್ ರಾಜಕೀಯಕ್ಕೆ ಹಿಂದೂ ಸಮಾಜದ ಮೇಲೆ ರಾಕ್ಷಸರಂತೆ ಎರಗುವ ಕಾಂಗ್ರೆಸಿನ ವಿರುದ್ಧ ಇಡೀ ಸಮಾಜ ಒಗ್ಗಟ್ಟಿನಿಂದ ನಿಲ್ಲಲಿದೆ.ಹಿಂದೂ ಸಮಾಜದ ಭೂಮಿಯನ್ನು ವಕ್ಫ್ ಬೋರ್ಡಿಗೆ ಹಂಚುತ್ತಿರುವ ಸರಕಾರದ ಅವನತಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಾವೆಲ್ಲರೂ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಗುಡುಗಿದ್ದಾರೆ.

Related posts

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

Suddi Udaya

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಹಲವು ವಾಹನಗಳು ಜಖಂ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!