26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

ಸಂಡೂರು : ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಅಂಬೆಗಾಲಿಡುವ ಕೂಸು ಎನ್ನುವ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶ ಪಡಿಸಿರುವುದು ಎಂದು ತಿರುಗೇಟು ನೀಡಿದ್ದಾರೆ.

ಹಗರಣ, ಮತಾಂಧ ಶಕ್ತಿಗಳ ಓಲೈಕೆಯ ಮೂಲಕ ರಾಜ್ಯದ ಜನತೆಯ ರಕ್ತ ಹೀರುತ್ತಿರುವ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರದ ರಾಕ್ಷಸಿ ಮನೋಭಾವವನ್ನು ನಿಯಂತ್ರಿಸಲು ಶ್ರೀ ಕೃಷ್ಣನ ಚಿಂತನೆಗಳ ಅಗತ್ಯವಿದೆ. ಬಿಜೆಪಿ ರಾಜ್ಯಾದ್ಯಕ್ಷರನ್ನು ಅಂಬೆಗಾಲಿಡುವ ಕೂಸು ಎಂದಿರುವ ಸಿದ್ಧರಾಮಯ್ಯ ಅವರು ಶ್ರೀ ಕೃಷ್ಣನ ಬಾಲ್ಯದಲ್ಲಿ ಪೂತನಿ, ಶಕಟಾಸುರ,ತೃಣಾವರ್ತರಂತಹ ಅಸುರೀ ಶಕ್ತಿಗಳನ್ನು ಅಂಬೆಗಾಲಿಡುತ್ತಲೇ ಧಮನಿಸಿರುವುದು ಎನ್ನುವುದನ್ನು ಮರಿಯಬಾರದು‌. ರಾಜ್ಯದಲ್ಲಿ ಕಾಂಗ್ರೆಸ್ ನಡೆಸುವ ದುಷ್ಕೃತ್ಯಗಳನ್ನು ನಿಯಂತ್ರಿಸಲು ಅಂಬೆಗಾಡುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಸೂಕ್ತ ವ್ಯಕ್ತಿ ಎಂದು ಹೇಳಿದ್ದಾರೆ.

ಮತಾಂಧರ ಮತ ಬ್ಯಾಂಕ್ ರಾಜಕೀಯಕ್ಕೆ ಹಿಂದೂ ಸಮಾಜದ ಮೇಲೆ ರಾಕ್ಷಸರಂತೆ ಎರಗುವ ಕಾಂಗ್ರೆಸಿನ ವಿರುದ್ಧ ಇಡೀ ಸಮಾಜ ಒಗ್ಗಟ್ಟಿನಿಂದ ನಿಲ್ಲಲಿದೆ.ಹಿಂದೂ ಸಮಾಜದ ಭೂಮಿಯನ್ನು ವಕ್ಫ್ ಬೋರ್ಡಿಗೆ ಹಂಚುತ್ತಿರುವ ಸರಕಾರದ ಅವನತಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಾವೆಲ್ಲರೂ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಗುಡುಗಿದ್ದಾರೆ.

Related posts

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya
error: Content is protected !!