26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಡಾ.ಶಿವರಾಮ ಕಾರಂತರ ಜನ್ಮದಿನಾಚರಣೆಯ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತುಗಳಿಗೆ ಶಿವರಾಮ ಕಾರಂತ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರಶಸ್ತಿ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಲಭಿಸಿದೆ.

ಕೋಟತಟ್ಟು ಕಾರಂತ ಥೀಂ ಪಾರ್ಕ್ ನಲ್ಲಿ ನ. 10 ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೇಘಾಲಯದ ರಾಜ್ಯಪಾಲ ವಿಜಯ ಶಂಕರ್, ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷೆ ಸುಭವಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಅವರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿ ಗೌರವಿಸಿದರು.

ಕಾಶಿಪಟ್ಣ ಗ್ರಾಮ ಪಂಚಾಯತ್ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಊರಿನ ಅಭಿವೃದ್ಧಿಯಲ್ಲಿ ತೊಡಗಿಸುತ್ತಿದೆ. ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿ ಮುಂದೆ ಸ್ವೀಕರಿಸಲಿದ್ದಾರೆ.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಸುಶೀಲ, ಶಿಲ್ಪ, ಸವಿತಾ, ರವೀಂದ್ರ,ಅಶೋಕ್ ಕುಮಾರ್, ಕಾರ್ಯದರ್ಶಿ ಲೀನಾ, ಸಿಬ್ಬಂದಿಗಳಾದ ಶ್ವೇತಾ, ರೇಷ್ಮಾ, ಸುರೇಖಾ, ಮುಖೇಶ್ ,ಪ್ರದೀಪ್, ಸುಶಾಂತ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya
error: Content is protected !!