May 6, 2026
Uncategorized

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

ಸಂಡೂರು :ರಾಜ್ಯದಲ್ಲಿ ಉಪಚುನಾವಣೆಯ ಕಾವೇರಿತ್ತಿರುವಂತೆ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿರುವ ಅವರು, ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಸಮರ್ಥ ಅಭ್ಯರ್ಥಿ ಬಂಗಾರು ಹನುಮಂತ ಅವರನ್ನು ಕಣಕ್ಕಿಳಿಸಿದೆ. ನಮ್ಮೆಲ್ಲರ ಹಿರಿಯ ನಾಯಕರಾಗಿರುವ ಬಿ.ಎಸ್ ಯಡಿಯೂರಪ್ಪ ನವರು, ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರೂ ಸೇರಿದಂತೆ ರಾಜ್ಯ ಮಟ್ಟದ ನಾಯಕರು ಸಂಡೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ.

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿರುವ ಮಠ ಮಂದಿರಗಳನ್ನು ವಕ್ಫ್ ಆಸ್ತಿ ಎಂದು ದಾಖಲೆ ನಿರ್ಮಿಸಲಾಗಿದೆ. ಅಲ್ಪಸಂಖ್ಯಾತ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ತಲತಲಾಂತರಗಳಿಂದ ಕೃಷಿಭೂಮಿಯನ್ನೇ ನಂಬಿಕೊಂಡಿರುವ ರೈತರ ಬೆನ್ನಿಗೆ ಚೂರಿ ಹಾಕುವ‌ ಕೆಲಸ ಮಾಡಲಾಗುತ್ತಿದೆ. ರೈತರ ಕೃಷಿ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸುವ ಮೂಲಕ ಅನ್ನದಾತರನ್ನು ಶೂಲಕ್ಕೇರಿಸುವ ಪ್ರಯತ್ನವನ್ನು ಖುದ್ದು ಸರಕಾರವೇ ಮಾಡುತ್ತಿರುವುದು ಈ ನಾಡಿನ ಜನತೆಯ ದೌರ್ಭಾಗ್ಯ ಎಂದು ಕಿಶೋರ್ ಕುಮಾರ್ ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಆಮಿಷಗಳಿಗೆ ಮನಸೋತು ಮತ ನೀಡಿದ್ದ ಜನತೆ ಇಂದು ಪರಿತಪಿಸುವಂತಾಗಿದೆ. ಹರಗಣಗಳ ಸರಪಳಿ ಕೊನೆಯಿಲ್ಲದಂತೆ ಬೆಳೆಯುತ್ತಿದೆ. ದಲಿತ ಸಮಾಜದ ಅಭಿವೃದ್ಧಿಗಾಗಿ ಇರುವ ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಕೊಳ್ಳೆಹೊಡೆಯುವ ಮೂಲಕ ದಲಿತ ಸಮಾಜದ ಬೆನ್ನಿಗಿರಿಯುವ ಹೀನ ಕೃತ್ಯ ವೆಸಗಿದೆ. ಈ ಎಲ್ಲಾ ದುಷ್ಕೃತ್ಯಗಳಿಗೆ ಈ ಮೂರು ಉಪ ಚುನಾವಣೆಯಲ್ಲಿ ಜನತೆ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್ ಸರಕಾರದ ಶವ ಪೆಟ್ಟಿಗೆಯ ಮೊದಲ ಮೊಳೆ ಸಂಡೂರಿನಲ್ಲೇ ಹೊಡೆಯಲಿದ್ದಾರೆ ಎಂದು ಹೇಳಿದ್ದಾರೆ.

Related posts

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya

ಬಂದಾರು ಜೈ ಶ್ರೀರಾಮ್ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya
error: Content is protected !!