25.7 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

ಸಂಡೂರು :ರಾಜ್ಯದಲ್ಲಿ ಉಪಚುನಾವಣೆಯ ಕಾವೇರಿತ್ತಿರುವಂತೆ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿರುವ ಅವರು, ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಸಮರ್ಥ ಅಭ್ಯರ್ಥಿ ಬಂಗಾರು ಹನುಮಂತ ಅವರನ್ನು ಕಣಕ್ಕಿಳಿಸಿದೆ. ನಮ್ಮೆಲ್ಲರ ಹಿರಿಯ ನಾಯಕರಾಗಿರುವ ಬಿ.ಎಸ್ ಯಡಿಯೂರಪ್ಪ ನವರು, ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರೂ ಸೇರಿದಂತೆ ರಾಜ್ಯ ಮಟ್ಟದ ನಾಯಕರು ಸಂಡೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ.

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿರುವ ಮಠ ಮಂದಿರಗಳನ್ನು ವಕ್ಫ್ ಆಸ್ತಿ ಎಂದು ದಾಖಲೆ ನಿರ್ಮಿಸಲಾಗಿದೆ. ಅಲ್ಪಸಂಖ್ಯಾತ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ತಲತಲಾಂತರಗಳಿಂದ ಕೃಷಿಭೂಮಿಯನ್ನೇ ನಂಬಿಕೊಂಡಿರುವ ರೈತರ ಬೆನ್ನಿಗೆ ಚೂರಿ ಹಾಕುವ‌ ಕೆಲಸ ಮಾಡಲಾಗುತ್ತಿದೆ. ರೈತರ ಕೃಷಿ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸುವ ಮೂಲಕ ಅನ್ನದಾತರನ್ನು ಶೂಲಕ್ಕೇರಿಸುವ ಪ್ರಯತ್ನವನ್ನು ಖುದ್ದು ಸರಕಾರವೇ ಮಾಡುತ್ತಿರುವುದು ಈ ನಾಡಿನ ಜನತೆಯ ದೌರ್ಭಾಗ್ಯ ಎಂದು ಕಿಶೋರ್ ಕುಮಾರ್ ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಆಮಿಷಗಳಿಗೆ ಮನಸೋತು ಮತ ನೀಡಿದ್ದ ಜನತೆ ಇಂದು ಪರಿತಪಿಸುವಂತಾಗಿದೆ. ಹರಗಣಗಳ ಸರಪಳಿ ಕೊನೆಯಿಲ್ಲದಂತೆ ಬೆಳೆಯುತ್ತಿದೆ. ದಲಿತ ಸಮಾಜದ ಅಭಿವೃದ್ಧಿಗಾಗಿ ಇರುವ ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಕೊಳ್ಳೆಹೊಡೆಯುವ ಮೂಲಕ ದಲಿತ ಸಮಾಜದ ಬೆನ್ನಿಗಿರಿಯುವ ಹೀನ ಕೃತ್ಯ ವೆಸಗಿದೆ. ಈ ಎಲ್ಲಾ ದುಷ್ಕೃತ್ಯಗಳಿಗೆ ಈ ಮೂರು ಉಪ ಚುನಾವಣೆಯಲ್ಲಿ ಜನತೆ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್ ಸರಕಾರದ ಶವ ಪೆಟ್ಟಿಗೆಯ ಮೊದಲ ಮೊಳೆ ಸಂಡೂರಿನಲ್ಲೇ ಹೊಡೆಯಲಿದ್ದಾರೆ ಎಂದು ಹೇಳಿದ್ದಾರೆ.

Related posts

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya
error: Content is protected !!