25.3 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

ಬೆಳ್ತಂಗಡಿ: ಮೂಡಬಿದ್ರೆಯ ಮಹಾವೀರ ಕಾಲೇಜಿನ ಇಂಟರ್ ಕಾಲೇಜ್ ಸೈನ್ಸ್ ಹಾಗೂ ಐಟಿ ಫೆಸ್ಟಿನಲ್ಲಿ ಮಾಜಿ ಶಾಸಕ ದಿ. ವಸಂತ ಬಂಗೇರರ ಸ್ಥಾಪಕತ್ವದ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಪಡೆಯುವುದರ ಜೊತೆಗೆ ಸಮಗ್ರ ಚಾಂಪಿಯನ್ ಶಿಪ್ ಗೆ ಭಾಜನರಾಗಿದ್ದಾರೆ.

ವರ್ಕಿಂಗ್ ಮಾಡೆಲ್ ನಲ್ಲಿ ಗಿರೀಶ ಪ್ರಥಮ ಸ್ಥಾನ, ಮೇಡ್ ಆಡ್ ನಲ್ಲಿ ದೀಪಕ್ ಮತ್ತು ತಂಡ ಪ್ರಥಮ, ರೀಲ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ವಿಷ್ಣು ಪ್ರಥಮ, ಕ್ವಿಜ್ ಕಾಂಪಿಟೇಶನ್ ನಲ್ಲಿ ಸಿದ್ದಾರ್ಥ ಹಾಗೂ ರಂಜಿತ್ ಪ್ರಥಮ, ಪೋಸ್ಟರ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ಶ್ರೀನಿತ್ಯಾ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಭಾಗವಹಿಸಿದ 7 ಸ್ಪರ್ಧೆಗಳಲ್ಲಿ 5 ರಲ್ಲಿ ಬಹುಮಾನಗಳಿಸಿ ಸಮಗ್ರ ಚಾಂಪಿಯನ್ ಆಗಿ ಗುರುದೇವ ಕಾಲೇಜ್ ಹೊರಹೊಮ್ಮಿದೆ. ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಕಾಲೇಜಿನ ಗಣಕವಿಜ್ಞಾನ ಉಪನ್ಯಾಸಕಿ ಶುಭಲಕ್ಷ್ಮೀ, ಜೀವಶಾಸ್ತ್ರ ಉಪನ್ಯಾಸಕಿ ಭಾಗ್ಯಶ್ರೀ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಈ ಸಾಧನೆಯನ್ನು ಶ್ರೀ ಗುರುದೇವ ಕಾಲೇಜಿನ ಆಡಳಿತ ಸಮಿತಿ ಅಭಿನಂದಿಸಿದೆ.

Related posts

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನೆ

Suddi Udaya

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

Suddi Udaya
error: Content is protected !!