May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

ಬೆಳ್ತಂಗಡಿ: ಮೂಡಬಿದ್ರೆಯ ಮಹಾವೀರ ಕಾಲೇಜಿನ ಇಂಟರ್ ಕಾಲೇಜ್ ಸೈನ್ಸ್ ಹಾಗೂ ಐಟಿ ಫೆಸ್ಟಿನಲ್ಲಿ ಮಾಜಿ ಶಾಸಕ ದಿ. ವಸಂತ ಬಂಗೇರರ ಸ್ಥಾಪಕತ್ವದ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಪಡೆಯುವುದರ ಜೊತೆಗೆ ಸಮಗ್ರ ಚಾಂಪಿಯನ್ ಶಿಪ್ ಗೆ ಭಾಜನರಾಗಿದ್ದಾರೆ.

ವರ್ಕಿಂಗ್ ಮಾಡೆಲ್ ನಲ್ಲಿ ಗಿರೀಶ ಪ್ರಥಮ ಸ್ಥಾನ, ಮೇಡ್ ಆಡ್ ನಲ್ಲಿ ದೀಪಕ್ ಮತ್ತು ತಂಡ ಪ್ರಥಮ, ರೀಲ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ವಿಷ್ಣು ಪ್ರಥಮ, ಕ್ವಿಜ್ ಕಾಂಪಿಟೇಶನ್ ನಲ್ಲಿ ಸಿದ್ದಾರ್ಥ ಹಾಗೂ ರಂಜಿತ್ ಪ್ರಥಮ, ಪೋಸ್ಟರ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ಶ್ರೀನಿತ್ಯಾ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಭಾಗವಹಿಸಿದ 7 ಸ್ಪರ್ಧೆಗಳಲ್ಲಿ 5 ರಲ್ಲಿ ಬಹುಮಾನಗಳಿಸಿ ಸಮಗ್ರ ಚಾಂಪಿಯನ್ ಆಗಿ ಗುರುದೇವ ಕಾಲೇಜ್ ಹೊರಹೊಮ್ಮಿದೆ. ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಕಾಲೇಜಿನ ಗಣಕವಿಜ್ಞಾನ ಉಪನ್ಯಾಸಕಿ ಶುಭಲಕ್ಷ್ಮೀ, ಜೀವಶಾಸ್ತ್ರ ಉಪನ್ಯಾಸಕಿ ಭಾಗ್ಯಶ್ರೀ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಈ ಸಾಧನೆಯನ್ನು ಶ್ರೀ ಗುರುದೇವ ಕಾಲೇಜಿನ ಆಡಳಿತ ಸಮಿತಿ ಅಭಿನಂದಿಸಿದೆ.

Related posts

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!