24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

ಬೆಳ್ತಂಗಡಿ: ಮೂಡಬಿದ್ರೆಯ ಮಹಾವೀರ ಕಾಲೇಜಿನ ಇಂಟರ್ ಕಾಲೇಜ್ ಸೈನ್ಸ್ ಹಾಗೂ ಐಟಿ ಫೆಸ್ಟಿನಲ್ಲಿ ಮಾಜಿ ಶಾಸಕ ದಿ. ವಸಂತ ಬಂಗೇರರ ಸ್ಥಾಪಕತ್ವದ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಪಡೆಯುವುದರ ಜೊತೆಗೆ ಸಮಗ್ರ ಚಾಂಪಿಯನ್ ಶಿಪ್ ಗೆ ಭಾಜನರಾಗಿದ್ದಾರೆ.

ವರ್ಕಿಂಗ್ ಮಾಡೆಲ್ ನಲ್ಲಿ ಗಿರೀಶ ಪ್ರಥಮ ಸ್ಥಾನ, ಮೇಡ್ ಆಡ್ ನಲ್ಲಿ ದೀಪಕ್ ಮತ್ತು ತಂಡ ಪ್ರಥಮ, ರೀಲ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ವಿಷ್ಣು ಪ್ರಥಮ, ಕ್ವಿಜ್ ಕಾಂಪಿಟೇಶನ್ ನಲ್ಲಿ ಸಿದ್ದಾರ್ಥ ಹಾಗೂ ರಂಜಿತ್ ಪ್ರಥಮ, ಪೋಸ್ಟರ್ ಮೇಕಿಂಗ್ ಕಾಂಪಿಟೇಶನ್ ನಲ್ಲಿ ಶ್ರೀನಿತ್ಯಾ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಭಾಗವಹಿಸಿದ 7 ಸ್ಪರ್ಧೆಗಳಲ್ಲಿ 5 ರಲ್ಲಿ ಬಹುಮಾನಗಳಿಸಿ ಸಮಗ್ರ ಚಾಂಪಿಯನ್ ಆಗಿ ಗುರುದೇವ ಕಾಲೇಜ್ ಹೊರಹೊಮ್ಮಿದೆ. ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಕಾಲೇಜಿನ ಗಣಕವಿಜ್ಞಾನ ಉಪನ್ಯಾಸಕಿ ಶುಭಲಕ್ಷ್ಮೀ, ಜೀವಶಾಸ್ತ್ರ ಉಪನ್ಯಾಸಕಿ ಭಾಗ್ಯಶ್ರೀ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಈ ಸಾಧನೆಯನ್ನು ಶ್ರೀ ಗುರುದೇವ ಕಾಲೇಜಿನ ಆಡಳಿತ ಸಮಿತಿ ಅಭಿನಂದಿಸಿದೆ.

Related posts

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya
error: Content is protected !!