28 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

ಕೊಕ್ಕಡ: ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಟ್ಟ ಹತ್ಯಡ್ಕ ಗ್ರಾಮದ ಪಲಸ್ತಡ್ಕ ಎಂಬಲ್ಲಿ ಸರ್ಕಾರಿ ರಕ್ಷಿತಾರಣ್ಯದಿಂದ ವ್ಯಾಪಕವಾಗಿ ಮರಗಳ ಮಾರಣಹೋಮ ನಡೆಯುತ್ತಿದೆ ಎಂಬ ಗ್ರಾಮಸ್ಥರ ದೂರು ಮತ್ತು ಪತ್ರಿಕಾ ವರದಿಯ ಹಿನ್ನೆಲೆಯಲ್ಲಿ ಪತ್ತೆ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಪ್ರಕರಣವನ್ನು ಭೇದಿಸಿ, ಕಾಡಿನಿಂದ ಕಳವು ಮಾಡಲಾಗಿದ್ದ ಮರಗಳನ್ನು ಪತ್ತೆ ಮಾಡಲಾಗಿ ಮರಗಳನ್ನು ಕಡಿಯಲು ಉಪಯೋಗಿಸಿದ ಯಂತ್ರಗಳ ಸಹಿತ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದೆ.

ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಮತ್ತು ಸಿಬ್ಬಂದಿಗಳ ತಂಡ ಹತ್ಯಡ್ಕ ಗ್ರಾಮದ ಪಲಸ್ತಡ್ಕ ಎಂಬಲ್ಲಿ ಕಾರ್ಯಾಚರಣೆ ನಡೆಸಿ ಸರಕಾರಿ ಅಧೀನದ ಕಾಡಿನಲ್ಲಿ ಮರುವ ಜಾತಿಯ 2 ಮರ, ಸರೋಳಿ ಜಾತಿಯ 2 ಮರ, ಚೇರೆ ಜಾತಿಯ-1 ಮರ ಮತ್ತು ಬನ್ಪು ಜಾತಿಯ 1 ಮರಗಳನ್ನು ಕಡಿದು ಸಾಗಾಟ ಮಾಡಿರುವುದನ್ನು ಪತ್ತೆ ಹಚ್ಚಿ ಈ ಪೈಕಿ ಬನ್ಪು ಮರದ 23 ಸೈಜುಗಳ ಸಹಿತ 1 ಮರ ಕತ್ತರಿಸುವ ಯಂತ್ರವನ್ನು ವಶಕ್ಕೆ ಪಡೆದುಕೊಂಡು ಆರೋಪಿ ಕಡಬ ತಾಲ್ಲೂಕು ಶಿರಾಡಿ ಗ್ರಾಮದ ಬಾಗಿಲುಗದ್ದೆ ಮನೆ ನಿವಾಸಿ ಪ್ರಕಾಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದೆ.

ಆರೋಪಿ ಪ್ರಕಾಶ್ ಬಂಧಿಸಲಾಗಿದ್ದು, ಜಾಮೀನು ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಯತೀಂದ್ರ ಕುಮಾರ್, ಗಸ್ತು ಅರಣ್ಯ ಪಾಲಕರಾದ ಸುನಿಲ್ ನಾಯ್ಕ, ಶಿವಾನಂದ ಕುದರಿ, ಜೀಪು ಚಾಲಕ ಕಿಶೋರ್ ಕುಮಾರ್ ಭಾಗವಹಿಸಿದ್ದರು.

Related posts

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya

ವೇಣೂರು: ಗುಂಡೂರಿ ನಿವಾಸಿ ಕುಸುಮಾ ನಿಧನ

Suddi Udaya
error: Content is protected !!