September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಹಾಯಕದೊಂದಿಗೆ ಹಾಗೂ ಬೆಳ್ತಂಗಡಿ ತಾಲೂಕಿನ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ನಡೆಯಿತು.

ಬೆಳ್ತಂಗಡಿ ಮುಖ್ಯ ಪೇಟೆಯ ರಾಜಮಾರ್ಗದ ಎರಡು ಇಕ್ಕೆಲಗಳಲ್ಲಿ ಸೈನಿಕರೊಡಗೂಡಿ ಎಕ್ಸೆಲ್ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯವನ್ನು ಆರಂಭಿಸಿದರು. ಇದೊಂದು ಕೇವಲ ಅಭಿಯಾನ ಮಾತ್ರವಲ್ಲದೆ ಜಾಗೃತಿ ಕಾರ್ಯಕ್ರಮವೂ ಆಗಿತ್ತು. ಅಯ್ಯಪ್ಪ ಭಜನಾ ಮಂದಿರದ ಎದುರುಗಡೆಯಿಂದ ಮೊದಲುಗೊಂಡು ತಾಲೂಕು ಆಸ್ಪತ್ರೆಯ ತನಕ ಸ್ವಚ್ಛತೆಯನ್ನು ನಡೆಸಿದರು. ಬಿರು ಬಿಸಿಲಿನಲ್ಲಿಯೂ ಎಕ್ಸೆಲ್ ವಿದ್ಯಾರ್ಥಿಗಳಲ್ಲಿನ ಸಾಮಾಜಿಕ ಕಾಳಜಿಯನ್ನು ಹಾಗೂ ಅಭಿಯಾನದಲ್ಲಿನ ಉತ್ಸಾಹದಾಯಕ ಪಾಲ್ಗೊಳ್ಳುವಿಕೆಯನ್ನು ಕಂಡು ಸಾರ್ವಜನಿಕರಿಂದ ಹೆಚ್ಚಿನ ಪ್ರಶಂಸೆಗೆ ಪಾತ್ರರಾದರು.

ಮಾಜಿ ಸೈನಿಕರು ಮಕ್ಕಳಿಗೆ ತಂಪು ಪಾನೀಯ ಮತ್ತು ಹಣ್ಣು ಹಂಪಲುಗಳನ್ನು ನೀಡಿದರು. ಬೆಳ್ತಂಗಡಿಯ ಪಟ್ಟಣ ಪಂಚಾಯತ್ ವತಿಯಿಂದ ಕಸ ವಿಲೇವಾರಿಗಾಗಿ ತ್ಯಾಜ್ಯ ಸಂಗ್ರಹ ವಾಹನದ ವ್ಯವಸ್ಥೆಯನ್ನು ಮಾಡಲಾಗಿತ್ತು.

Related posts

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya
error: Content is protected !!