ಬೆಳ್ತಂಗಡಿ:ಕಲೆ, ಸಾಹಿತ್ಯ, ಕ್ರೀಡೆ, ಶಿಕ್ಷಣ ಕ್ಷೇತ್ರ ದಲ್ಲಿ ಸಾಧನೆ ಮೆರೆದಿರುವ ಬಹುಮುಖ ಪ್ರತಿಭಾ ಸಂಪನ್ನೆ ವಸಂತಿ ಟಿ. ನಿಡ್ಲೆ ಅವರ ಅಪ್ರತಿಮ ಸಾಧನೆಯನ್ನು ಗುರುತಿಸಿ” ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024 ಪಡೆದು ಮುಗೇರ ಸಮುದಾಯಕ್ಕೆ ಕೀರ್ತಿಯನ್ನು ತಂದಿರುವ ಈ ಸಂದರ್ಭದಲ್ಲಿ ಮೊಗೇರ ಸಂಘದ ವತಿಯಿಂದ ಅವರ ಮನೆಗೆ ಭೇಟಿ ನೀಡಿ ಅಭಿನಂದಿಸಲಾಯಿತು.
ವೃತ್ತಿಯಲ್ಲಿ ಶಿಕ್ಷಕಿಯಾಗಿ,ಪ್ರವೃತ್ತಿಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ ಕಲಾವಿದೆಯಾಗಿ ಗುರುತಿಸಿಕೊಂಡಿರುವ ಇವರು, ಯಕ್ಷಗಾನ, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಕೃಷಿ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ಮುಗೇರ ಸಮಾಜಕ್ಕೆ ಮಾದರಿಯಾಗಲಿ.
ಈ ಸಂದರ್ಭದಲ್ಲಿ ಜಿಲ್ಲಾ ಮೊಗೇರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು
.













