24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

ಬೆಳ್ತಂಗಡಿ: “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ಮಂಗಳೂರು ಇದರ ಹೂಡಿಕೆ
ಮಾಹಿತಿ ಕಾರ್ಯಾಗಾರ ಹಾಗು ಉದ್ದೇಶಿತ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಯ ಉದ್ಘಾಟನಾ ಪೂರ್ವ ಸಭೆಯನ್ನು ನ.10 ರಂದು ಉಜಿರೆ ಓಷಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಜರುಗಿತು.

ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್, ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಸ್ಥಾಪಕರಾದ ನಾಮದೇವ್ ರಾವ್, ಪ್ರಗತಿಪರ ಕೃಷಿಕರಾದ ನಾರಾಯಣ ಗೌಡ ದೇವಸ್ಯ, ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಹಾಗೂ ರಾಘವೇಂದ್ರ ಉಪಾಧ್ಯಾಯ ರವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ಷೇರು ಮಾರುಕಟ್ಟೆಯ ಪ್ರಾಥಮಿಕ ಅರಿವಿನ ಬಗ್ಗೆ ಮಾತನಾಡಿದ ಕಿಶನ್ ಆಚಾರ್ಯ ರವರು ಭಾರತದಲ್ಲಿ ಷೇರು ಮಾರುಕಟ್ಟೆ ಹೂಡಿಕೆ ಪ್ರಮಾಣ ಕೇವಲ 3% ಇದ್ದು ಇದರ ಮಾಹಿತಿ ಕೊರತೆಯಿಂದ ಬಹುದೊಡ್ಡ ಅವಕಾಶದಿಂದ ದೇಶದ ಜನರು ವಂಚಿತರಾಗಿದ್ದಾರೆ‌. ಹಾಗೂ ಷೇರು ಮಾರುಕಟ್ಟೆಯಲ್ಲಿರುವ ಸಕಾರಾತ್ಮಕ ಮತ್ತು ನಕಾರಾತ್ಮಕ ಹೂಡಿಕೆಗಳ ಬಗ್ಗೆ ತಿಳಿಸಿ ಇದಕ್ಕಾಗಿ ಸರಳ ರೀತಿಯಲ್ಲಿ ಇಂಪೀರಿಯಲ್ ಕಾರ್ಪೊರೇಷನ್ ನ ಸ್ಥಾಪಕರು ನಿಶಾನ್ ಕೃಷ್ಣ ಭಂಡಾರಿಯವರು ಈ ಸಂಸ್ಥೆಯನ್ನು ಹುಟ್ಟು ಹಾಕಿ ಇಂದು ಸಾವಿರಾರು ಜನರು ಈ ಲಾಭವನ್ನು ಪಡೆದುಕೊಂಡ ಬಗ್ಗೆ ತಿಳಿಸಿಕೊಟ್ಟರು.

ಇಂಪೀರಿಯಲ್ ಕಾರ್ಪೊರೇಷನ್ ಸಂಸ್ಥಾಪಕರಾದ ನಿಶಾನ್ ಕೃಷ್ಣ ಭಂಢಾರಿಯವರು‌ ಕೂಡ ತಮ್ಮ ಕನಸಿನ ಯೋಜನೆಗಳ ಬಗ್ಗೆ ತಿಳಿಸಿ ಸಹಕಾರ ಕೋರಿದರು. ಸಂಸ್ಥೆಯ ನಿರ್ದೇಶಕರಾದ ಚಂದ್ರಶೇಖರ, ಕಾರ್ಯಕ್ರಮದ ಆಯೋಜಕರಾದ ರಾಮಚಂದ್ರ ಗೌಡ ಕಾನರ್ಪ, ನಂದೀಶ್ ಭಂಡಾರಿ ಮುಂಡಾಜೆ, ಚಂದ್ರಶೇಖರ ಕಾನರ್ಪ, ವಿಠಲ್ ಎಂ ಕೆ ನಿಡ್ಲೆ, ರಾಘವೇಂದ್ರ ಉಪಾಧ್ಯಾಯ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಹರೀಶ್ ನೆರಿಯ ಹಾಗೂ ವಿಠಲ ಕೊಕ್ಕಡ ನಿರ್ವಹಿಸಿದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!