28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಮೊಗ್ರು : ತೋಟಗಾರಿಕೆ ಇಲಾಖೆ ಬೆಳ್ತಂಗಡಿ, ಬಂದಾರು ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ, ಇದರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ 10 ರಂದು ಮುಗೇರಡ್ಕ ಮೂವರು ದೈವಸ್ಥಾನದ ವಠಾರದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ವಿಟ್ಲ ಪ್ರಾದೇಶಿಕ ಕೇಂದ್ರ ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳಾದ ಡಾ.ಭವಿಷ್ಯ ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಹಾಗೂ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹಾವೀರ ರವರು ಇಲಾಖೆಯ ಯೋಜನೆಗಳ ಸಮಗ್ರ ಮಾಹಿತಿ ನೀಡಿ ಸಂಧರ್ಬೋಚಿತವಾಗಿ ಮಾತನಾಡಿದರು.

ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪವತಿ ಬರಮೇಲು, ಬಂದಾರು ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಪರಮೇಶ್ವರಿ ಕೆ ಗೌಡ, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಮಾಜಿ ಉಪಾಧ್ಯಕ್ಷರು ಹಾಲಿ ಸದಸ್ಯ ಗಂಗಾಧರ ಪೂಜಾರಿ, ಮುಗೇರಡ್ಕ ಮೂವರು ದೈವಸ್ಥಾನದ ಆಡಳಿತ ಮೊಕ್ತೇಸರರಾದ ರಾಮ್ಮಣ್ಣ ಗೌಡ ದೇವಸ, ಮನೋಹರ ಗೌಡ ಅಂತರ, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಶೀಲಾವತಿ ಬಾಬು ಗೌಡ, ಬೆಳ್ತಂಗಡಿ ತೋಟಗಾರಿಕೆ ಇಲಾಖಾ ಸಹಾಯಕ ಅಧಿಕಾರಿಗಳಾದ ಮಲ್ಲಿನಾಥ ಬಿರಾದಾರ್, ಭೀಮರಾಯ ಸೊಡ್ಡಗಿ ಉಪಸ್ಥಿತರಿದ್ದರು.


ಹೆಚ್ಚಿನ ರೈತರು ತರಬೇತಿ ಶಿಬಿರ ಮಾಹಿತಿ ಪಡೆದುಕೊಂಡರು. ವಕೀಲರಾದ ಉದಯ ಬಿ ಕೆ ಸಹಕರಿಸಿದರು, ಬಂದಾರು ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಬಂದಾರು ಪಂಚಾಯತ್ ಸದಸ್ಯ ಗಂಗಾಧರ ಪೂಜಾರಿ ಧನ್ಯವಾದವಿತ್ತರು.

Related posts

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಬಲಿಪ ಪ್ರಸಾದ ಸಂಸ್ಮರಣೆ ಸರಣಿ ಕಾರ್ಯಕ್ರಮ : ಕಾನರ್ಪ ಉಮೇಶ ಆಚಾರ್ಯರಿಗೆ ಸನ್ಮಾನ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!