May 6, 2026
Uncategorized

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

ಸಂಡೂರು : ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಅಂಬೆಗಾಲಿಡುವ ಕೂಸು ಎನ್ನುವ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶ ಪಡಿಸಿರುವುದು ಎಂದು ತಿರುಗೇಟು ನೀಡಿದ್ದಾರೆ.

ಹಗರಣ, ಮತಾಂಧ ಶಕ್ತಿಗಳ ಓಲೈಕೆಯ ಮೂಲಕ ರಾಜ್ಯದ ಜನತೆಯ ರಕ್ತ ಹೀರುತ್ತಿರುವ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರದ ರಾಕ್ಷಸಿ ಮನೋಭಾವವನ್ನು ನಿಯಂತ್ರಿಸಲು ಶ್ರೀ ಕೃಷ್ಣನ ಚಿಂತನೆಗಳ ಅಗತ್ಯವಿದೆ. ಬಿಜೆಪಿ ರಾಜ್ಯಾದ್ಯಕ್ಷರನ್ನು ಅಂಬೆಗಾಲಿಡುವ ಕೂಸು ಎಂದಿರುವ ಸಿದ್ಧರಾಮಯ್ಯ ಅವರು ಶ್ರೀ ಕೃಷ್ಣನ ಬಾಲ್ಯದಲ್ಲಿ ಪೂತನಿ, ಶಕಟಾಸುರ,ತೃಣಾವರ್ತರಂತಹ ಅಸುರೀ ಶಕ್ತಿಗಳನ್ನು ಅಂಬೆಗಾಲಿಡುತ್ತಲೇ ಧಮನಿಸಿರುವುದು ಎನ್ನುವುದನ್ನು ಮರಿಯಬಾರದು‌. ರಾಜ್ಯದಲ್ಲಿ ಕಾಂಗ್ರೆಸ್ ನಡೆಸುವ ದುಷ್ಕೃತ್ಯಗಳನ್ನು ನಿಯಂತ್ರಿಸಲು ಅಂಬೆಗಾಡುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಸೂಕ್ತ ವ್ಯಕ್ತಿ ಎಂದು ಹೇಳಿದ್ದಾರೆ.

ಮತಾಂಧರ ಮತ ಬ್ಯಾಂಕ್ ರಾಜಕೀಯಕ್ಕೆ ಹಿಂದೂ ಸಮಾಜದ ಮೇಲೆ ರಾಕ್ಷಸರಂತೆ ಎರಗುವ ಕಾಂಗ್ರೆಸಿನ ವಿರುದ್ಧ ಇಡೀ ಸಮಾಜ ಒಗ್ಗಟ್ಟಿನಿಂದ ನಿಲ್ಲಲಿದೆ.ಹಿಂದೂ ಸಮಾಜದ ಭೂಮಿಯನ್ನು ವಕ್ಫ್ ಬೋರ್ಡಿಗೆ ಹಂಚುತ್ತಿರುವ ಸರಕಾರದ ಅವನತಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಾವೆಲ್ಲರೂ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಗುಡುಗಿದ್ದಾರೆ.

Related posts

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

Suddi Udaya

ಹೊಸ್ಮರ್ ವಲಯದ ಈದು ಒಕ್ಕೂಟದ ಶ್ರೀ ರಾಜಶ್ರೀ ಸ್ವಸಹಾಯ ಸಂಘದ 20 ನೇ ವರ್ಷದ ಸಂಭ್ರಮಾಚಾರಣೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya
error: Content is protected !!