28 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

ಸಂಡೂರು : ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಅಂಬೆಗಾಲಿಡುವ ಕೂಸು ಎನ್ನುವ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶ ಪಡಿಸಿರುವುದು ಎಂದು ತಿರುಗೇಟು ನೀಡಿದ್ದಾರೆ.

ಹಗರಣ, ಮತಾಂಧ ಶಕ್ತಿಗಳ ಓಲೈಕೆಯ ಮೂಲಕ ರಾಜ್ಯದ ಜನತೆಯ ರಕ್ತ ಹೀರುತ್ತಿರುವ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರದ ರಾಕ್ಷಸಿ ಮನೋಭಾವವನ್ನು ನಿಯಂತ್ರಿಸಲು ಶ್ರೀ ಕೃಷ್ಣನ ಚಿಂತನೆಗಳ ಅಗತ್ಯವಿದೆ. ಬಿಜೆಪಿ ರಾಜ್ಯಾದ್ಯಕ್ಷರನ್ನು ಅಂಬೆಗಾಲಿಡುವ ಕೂಸು ಎಂದಿರುವ ಸಿದ್ಧರಾಮಯ್ಯ ಅವರು ಶ್ರೀ ಕೃಷ್ಣನ ಬಾಲ್ಯದಲ್ಲಿ ಪೂತನಿ, ಶಕಟಾಸುರ,ತೃಣಾವರ್ತರಂತಹ ಅಸುರೀ ಶಕ್ತಿಗಳನ್ನು ಅಂಬೆಗಾಲಿಡುತ್ತಲೇ ಧಮನಿಸಿರುವುದು ಎನ್ನುವುದನ್ನು ಮರಿಯಬಾರದು‌. ರಾಜ್ಯದಲ್ಲಿ ಕಾಂಗ್ರೆಸ್ ನಡೆಸುವ ದುಷ್ಕೃತ್ಯಗಳನ್ನು ನಿಯಂತ್ರಿಸಲು ಅಂಬೆಗಾಡುವ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಸೂಕ್ತ ವ್ಯಕ್ತಿ ಎಂದು ಹೇಳಿದ್ದಾರೆ.

ಮತಾಂಧರ ಮತ ಬ್ಯಾಂಕ್ ರಾಜಕೀಯಕ್ಕೆ ಹಿಂದೂ ಸಮಾಜದ ಮೇಲೆ ರಾಕ್ಷಸರಂತೆ ಎರಗುವ ಕಾಂಗ್ರೆಸಿನ ವಿರುದ್ಧ ಇಡೀ ಸಮಾಜ ಒಗ್ಗಟ್ಟಿನಿಂದ ನಿಲ್ಲಲಿದೆ.ಹಿಂದೂ ಸಮಾಜದ ಭೂಮಿಯನ್ನು ವಕ್ಫ್ ಬೋರ್ಡಿಗೆ ಹಂಚುತ್ತಿರುವ ಸರಕಾರದ ಅವನತಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಾವೆಲ್ಲರೂ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಗುಡುಗಿದ್ದಾರೆ.

Related posts

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya
error: Content is protected !!