24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

ಬೆಳ್ತಂಗಡಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ ಭಾಗವಹಿಸಿದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಜನಕಲ್ಯಾಣ ಮರೆತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸುವ ಸದಾವಕಾಶ ಬಂದೊದಗಿದ್ದು ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನು ದಾಖಲೆಯ ಮತಗಳ ಅಂತರಗಳಿಂದ ಆಶೀರ್ವದಿಸಬೇಕೆಂದು ಕಿಶೋರ್ ಕುಮಾರ್ ಅವರು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಬಂಗಾರು ಹನುಮಂತು, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ , ರಾಮುಲು , ಅರಗ ಜ್ಞಾನೇಂದ್ರ , ಶಾಸಕ ಡಾ. ಎಂ ಚಂದ್ರಪ್ಪ , ರಾಜ್ಯ ಕಾರ್ಯದರ್ಶಿ ದಿವಾಕರ್, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

Suddi Udaya
error: Content is protected !!