March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

ಬೆಳ್ತಂಗಡಿ: ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಕಸ್ತೂರಿರಂಗನ್ ವರದಿ ಹಾಗು ಅದರ ಆಧಾರವಾಗಿರುವ ಗಾಡ್ಗಿಲ್ ವರದಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಅಳವಡಿಸಲು ಅಧಿಕಾರಿಗಳು ವಿಫಲಾರಾಗಿದ್ದು, ಪರಿಣಾಮವಾಗಿ ಕೃಷಿ ಭೂಮಿಗಳನ್ನು ಅರಣ್ಯ ಎಂದು ತಪ್ಪಾಗಿ ಮಾಪನಮಾಡಿದ್ದಾರೆ. ಇದರ ಆತಂಕಗಳಿಂದ ಕೃಷಿಕರ, ರೈತರ ಭೂಮಿಯ ಮೇಲಿನ ತಮ್ಮ ಹಕ್ಕು ಸಂರಕ್ಷಣೆಗೆ ನಡೆಸುವ ಹೋರಾಟಕ್ಕೆ ಮಲೆನಾಡು ಸಂರಕ್ಷಣಾ ವೇದಿಕೆಗೆ ಸಾರ್ವಜನಿಕರು ಬೆಂಬಲ ನೀಡುವಂತೆ ತಿಳಿಸಿದ್ದಾರೆ.

ಮಲೆನಾಡಿನ ಜನತೆ ಎಚ್ಚೆತ್ತು, ಜಾತಿ, ಧರ್ಮ, ಪಂಗಡ, ಪಕ್ಷಗಳನ್ನು ಮರೆತು ಮಣ್ಣಿನ ಸಂರಕ್ಷಣೆಗೆ ಹೋರಾಟಕಿಳಿಯೋಣ. ಮಲೆನಾಡಿನ ಮಣ್ಣನ್ನು ಕೃಷಿರೀತಿಗಳನ್ನು ಸರಿಯಾಗಿ ತಿಳಿಯದೆ ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಈ ಹೋರಾಟವನ್ನು ಮುನ್ನಡೆಸೋಣ. ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಬ್ರಹತ್ ಸಮ್ಮೇಳನಕ್ಕೆ ಸಾರ್ವಜನಿಕರೆಲ್ಲರು ಭಾಗವಹಿಸಿ ನಮ್ಮ ಹಕ್ಕು ಸಂರಕ್ಷಣೆಗಾಗಿ ಹೋರಾಡೋಣ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯ ಮಾಧ್ಯಮ ನಿರ್ದೇಶಕ ಫಾ| ಸುನಿಲ್ ಐಸಕ್ ತಿಳಿಸಿದ್ದಾರೆ.

Related posts

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!