September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

ಬೆಳ್ತಂಗಡಿ: ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಕಸ್ತೂರಿರಂಗನ್ ವರದಿ ಹಾಗು ಅದರ ಆಧಾರವಾಗಿರುವ ಗಾಡ್ಗಿಲ್ ವರದಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಅಳವಡಿಸಲು ಅಧಿಕಾರಿಗಳು ವಿಫಲಾರಾಗಿದ್ದು, ಪರಿಣಾಮವಾಗಿ ಕೃಷಿ ಭೂಮಿಗಳನ್ನು ಅರಣ್ಯ ಎಂದು ತಪ್ಪಾಗಿ ಮಾಪನಮಾಡಿದ್ದಾರೆ. ಇದರ ಆತಂಕಗಳಿಂದ ಕೃಷಿಕರ, ರೈತರ ಭೂಮಿಯ ಮೇಲಿನ ತಮ್ಮ ಹಕ್ಕು ಸಂರಕ್ಷಣೆಗೆ ನಡೆಸುವ ಹೋರಾಟಕ್ಕೆ ಮಲೆನಾಡು ಸಂರಕ್ಷಣಾ ವೇದಿಕೆಗೆ ಸಾರ್ವಜನಿಕರು ಬೆಂಬಲ ನೀಡುವಂತೆ ತಿಳಿಸಿದ್ದಾರೆ.

ಮಲೆನಾಡಿನ ಜನತೆ ಎಚ್ಚೆತ್ತು, ಜಾತಿ, ಧರ್ಮ, ಪಂಗಡ, ಪಕ್ಷಗಳನ್ನು ಮರೆತು ಮಣ್ಣಿನ ಸಂರಕ್ಷಣೆಗೆ ಹೋರಾಟಕಿಳಿಯೋಣ. ಮಲೆನಾಡಿನ ಮಣ್ಣನ್ನು ಕೃಷಿರೀತಿಗಳನ್ನು ಸರಿಯಾಗಿ ತಿಳಿಯದೆ ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಈ ಹೋರಾಟವನ್ನು ಮುನ್ನಡೆಸೋಣ. ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಬ್ರಹತ್ ಸಮ್ಮೇಳನಕ್ಕೆ ಸಾರ್ವಜನಿಕರೆಲ್ಲರು ಭಾಗವಹಿಸಿ ನಮ್ಮ ಹಕ್ಕು ಸಂರಕ್ಷಣೆಗಾಗಿ ಹೋರಾಡೋಣ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯ ಮಾಧ್ಯಮ ನಿರ್ದೇಶಕ ಫಾ| ಸುನಿಲ್ ಐಸಕ್ ತಿಳಿಸಿದ್ದಾರೆ.

Related posts

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya
error: Content is protected !!