23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

ಬೆಳ್ತಂಗಡಿ: ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಕಸ್ತೂರಿರಂಗನ್ ವರದಿ ಹಾಗು ಅದರ ಆಧಾರವಾಗಿರುವ ಗಾಡ್ಗಿಲ್ ವರದಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಅಳವಡಿಸಲು ಅಧಿಕಾರಿಗಳು ವಿಫಲಾರಾಗಿದ್ದು, ಪರಿಣಾಮವಾಗಿ ಕೃಷಿ ಭೂಮಿಗಳನ್ನು ಅರಣ್ಯ ಎಂದು ತಪ್ಪಾಗಿ ಮಾಪನಮಾಡಿದ್ದಾರೆ. ಇದರ ಆತಂಕಗಳಿಂದ ಕೃಷಿಕರ, ರೈತರ ಭೂಮಿಯ ಮೇಲಿನ ತಮ್ಮ ಹಕ್ಕು ಸಂರಕ್ಷಣೆಗೆ ನಡೆಸುವ ಹೋರಾಟಕ್ಕೆ ಮಲೆನಾಡು ಸಂರಕ್ಷಣಾ ವೇದಿಕೆಗೆ ಸಾರ್ವಜನಿಕರು ಬೆಂಬಲ ನೀಡುವಂತೆ ತಿಳಿಸಿದ್ದಾರೆ.

ಮಲೆನಾಡಿನ ಜನತೆ ಎಚ್ಚೆತ್ತು, ಜಾತಿ, ಧರ್ಮ, ಪಂಗಡ, ಪಕ್ಷಗಳನ್ನು ಮರೆತು ಮಣ್ಣಿನ ಸಂರಕ್ಷಣೆಗೆ ಹೋರಾಟಕಿಳಿಯೋಣ. ಮಲೆನಾಡಿನ ಮಣ್ಣನ್ನು ಕೃಷಿರೀತಿಗಳನ್ನು ಸರಿಯಾಗಿ ತಿಳಿಯದೆ ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಈ ಹೋರಾಟವನ್ನು ಮುನ್ನಡೆಸೋಣ. ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಬ್ರಹತ್ ಸಮ್ಮೇಳನಕ್ಕೆ ಸಾರ್ವಜನಿಕರೆಲ್ಲರು ಭಾಗವಹಿಸಿ ನಮ್ಮ ಹಕ್ಕು ಸಂರಕ್ಷಣೆಗಾಗಿ ಹೋರಾಡೋಣ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯ ಮಾಧ್ಯಮ ನಿರ್ದೇಶಕ ಫಾ| ಸುನಿಲ್ ಐಸಕ್ ತಿಳಿಸಿದ್ದಾರೆ.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya
error: Content is protected !!