23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

ಇಳಂತಿಲ : ಇಳಂತಿಲ ಗ್ರಾಮ ಪಂಚಾಯತ್ ನ 1ನೇ ವಾರ್ಡ್ ನ ಬಿ ಜೆ ಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ರೇಖಾ ರವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ನವಂಬರ್ 23 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಈಶ್ವರ ಗೌಡ ರವರ ಪತ್ನಿ ಕುಸುಮ ಈಶ್ವರ ಗೌಡ ಇಂದು ನಾಮಪತ್ರ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಈಶ್ವರ ಭಟ್, ಮಾಹಿತೋಡಿ, ಪುತ್ತೂರು ವಿಟ್ಲ ಬ್ಲಾಕ್ ಕಾಂಗ್ರೇಸ್ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ ಬಿ, ಉಪ ಚುನಾವಣೆಯ ಪಕ್ಷದ ಉಸ್ತುವಾರಿಗಳಾದ ಜಯವಿಕ್ರಮ್ ಕಲ್ಲಾಪು, ಸಹ ಉಸ್ತುವಾರಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ, ಹಾಲಿ ಸದಸ್ಯ ಯು ಕೆ ಇಸುಬು, ಹಿರಿಯರಾದ ಜಿನ್ನಪ್ಪ ಪೂಜಾರಿ, ಆಟಾಲು,ಮಾಜಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಈಶ್ವರ ಗೌಡ, ಬಾರಿಕೆ, ಸವಿತಾ ಮೋಹನ ನಾಯ್ಕ, ಕಾಂಗ್ರೇಸ್ ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಪೂಜಾರಿ, ನೂಜ, ಮಾಜಿ ಅಧ್ಯಕ್ಷ ನಾರಾಯಣ ಗೌಡ, ಇಳಂತಿಲ ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಅಬ್ದುಲ್ ಲತೀಫ್, ಕನ್ಯಾರಕೋಡಿ, ಡೋನ್ ಬೋಸ್ಕೊ ಲೋಬೋ, ಗ್ರೇಸಿ ಲೋಬೋ ಮುಂತಾದವರು ಉಪಸ್ಥಿತರಿದ್ದರು.

Related posts

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya
error: Content is protected !!