23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

ಉಜಿರೆ: ಇಲ್ಲಿನ ಸಾಯಿರಾಂ ಕಾಂಪ್ಲೆಕ್ಸ್ ನಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ನ.11 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಪಿ ಸಂಸ್ಥೆಗಳ ಉದ್ಯಮಿ ಶ್ರೀಮತಿ ಅಪರ್ಣಾ ಶಿವಕಾಂತ್ ನೇರವೇರಿಸಿ ಶುಭಕೋರಿದರು. ಎಸ್.ಡಿ.ಎಂ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಂಗೀತ ಹರ್ಷ ದೀಪ ಬೆಳಗಿಸಿ ಶುಭಹಾರೈಸಿದರು.

ಸಂಸ್ಥೆಯ ಮಾಲಕಿ ಶ್ರೀಮತಿ ಸಾರಿಕಾ ಶ್ರೇಯಸ್ ಬೊಳ್ಮ ಬೆಂಗಳೂರಿನ ವಂಡರ್ ಅಕಾಡೆಮಿ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ.

ಕಾರ್ಯಕ್ರಮದಲ್ಲಿ ಕಮಲೇಶ ರೆಸಿಡೆನ್ಸಿ ಮಾಲಕರಾದ ಉಷಾ ಮತ್ತು ಶ್ರೀನಿವಾಸ ಗೌಡ, ನಿವೃತ್ತ ಯೋಧರಾದ ಡಿ.ಕೆ ಸದಾಶಿವ ಗೌಡ, ಪ್ರಭಾಕರ ಗೌಡ, ಸಿವಿಲ್ ಎಂಜಿನಿಯರ್ ಮತ್ತು CEng ಶ್ರೇಯಸ್ ಬಿ ಎಸ್ , ಮೆರೈನ್ ಇಂಜಿನಿಯರ್ ಯಶಸ್ ಬಿ ಎಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಿಸಾನ್ ಕಾಂಗ್ರೆಸ್ ಸಮಿತಿ ಸದಸ್ಯರಾದ ಯತೀಶ್ ಕುಮಾರ್ ಬಾನಡ್ಕ, ಅಬ್ಯಾಸ್ ಕಾಲೇಜಿನ ಉಪ ಪ್ರಾಂಶುಪಾಲರು ಚಂದ್ರಶೇಖರ್ ಗೌಡ, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ, ಬಾಲಕೃಷ್ಣ ಗೌಡ ಉಪಸ್ಥಿತರಿದ್ದು ಶುಭಹಾರೈಸಿದರು.

Related posts

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!