25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

ಬೆಳ್ತಂಗಡಿ: ತುಳು ಚಲನಚಿತ್ರ ರಂಗದಲ್ಲಿ ಹೊಸತನದ ಅಲೆಯನ್ನ ಸೃಷ್ಟಿ ಮಾಡಿ ಆ ಮುಖೇನ ಪ್ರೇಕ್ಷಕರ ಮನ ಗೆಲ್ಲುವ ತವಕದಲ್ಲಿರುವ ತಂಡ, ತುಳುನಾಡಿನ‌ ಮಣ್ಣಿನ‌ ಸೊಗಡಿನೊಂದಿಗೆ, ಕೇಪುಲ ಪಲ್ಕೆಯ ಕಥೆಯನ್ನ ನಮಗೆ ಊಣಬಡಿಸಿ ನಮ್ಮೆಲ್ಲರ ಮನಸ್ಸಲ್ಲಿ ಸಹಿ ಹಾಕಲು ದಸ್ಕತ್ ತಂಡದವರು ತಯಾರಾಗಿದ್ದಾರೆ.

ಈಗಾಗಲೇ ಬಹುತೇಕ‌ ಸ್ಯಾಂಡಲ್ ವುಡ್, ಕೋಸ್ಟಲ್ ವುಡ್ ನ ದಿಗ್ಗಜರು ಮತ್ತು ನಾಡಿನ‌ ಜನತೆ ಚಲನಚಿತ್ರದ ಟೀಸರ್ ನೋಡಿ ಮೆಚ್ಚಿಕ್ಕೊಂಡಿದ್ದು ಉತ್ತಮವಾದ ಪ್ರತಿಕ್ರಿಯೆಯನ್ನ ನೀಡಿದ್ದಾರೆ, ಸಿನಿಮಾ ಮೇಕಿಂಗ್, ಸಂಗೀತ ಸಂಯೋಜನೆ, ತುಳುನಾಡಿನ‌ ಸಂಸ್ಕೃತಿ‌ ಮತ್ತು‌ ಪಾತ್ರಗಳಲ್ಲಿನ ನೈಜತೆ ಎಲ್ಲರ ಮನಸ್ಸನ್ನ ಗೆದ್ದಿದ್ದು ಚಲನಚಿತ್ರ ಯಾವಾಗ ಬಿಡುಗಡೆ ಅನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಹೆಸರಾಂತ ಗಾಯಕ, ಸಂಗೀತ ನಿರ್ದೇಶಕರಾದ ಡಾ।ಗುರುಕಿರಣ್ ಅವರು ಬಿಡುಗಡೆ ದಿನಾಂಕವನ್ನ ಘೋಷಣೆ ಮಾಡಿದ್ದು ಡಿ.13 ಕ್ಕೆ ತುಳುನಾಡಿನಾದ್ಯಂತ ದಸ್ಕತ್ ತುಳು ಚಿತ್ರ ತೆರೆ ಮೇಲೆ ಅಬ್ಬರಿಸಲಿದೆ.

ಕೃಷ್ಣ ಜೆ ಪಾಲೆಮಾರ್ ಅರ್ಪಿಸುವ ಈ ಚಿತ್ರವನ್ನ ರಾಘವೇಂದ್ರ ಕುಡ್ವ ನಿರ್ಮಿಸಿದ್ದು, ಕಾಮಿಡಿ ಕಿಲಾಡಿ ಖ್ಯಾತಿಯ ಬಹುಮುಖ ಪ್ರತಿಭೆ ಅನೀಶ್ ಪೂಜಾರಿ ವೇಣೂರು ಆಕ್ಷನ್ ಕಟ್ ಹೇಳಿದ್ದಾರೆ. ಛಾಯಾಗ್ರಹಣದಲ್ಲಿ ಸಂತೋಷ್ ಆಚಾರ್ಯ ಗುಂಪಲಾಜೆ, ಸಂಕಲನ ಗಣೇಶ್ ನೀರ್ಚಾಲ್, ಸಂಗೀತ ಸಂಯೋಜನೆಯಲ್ಲಿ ಸಮರ್ಥನ್ ಎಸ್ ರಾವ್ ಜೊತೆಯಾಗಿದ್ದು, ಸ್ಮಿತೇಶ್ ಬಾರ್ಯ, ವಿನೋದ್ ರಾಜ್ ಕಲ್ಮಂಜ, ನಿಶಿತ್ ಶೆಟ್ಟಿ , ಮನೋಜ್ ಆನಂದ್ , ದೀಕ್ಷಿತ್ ಧರ್ಮಸ್ಥಳ ತಂಡದ ಶಕ್ತಿಯಾಗಿದ್ದಾರೆ. ಹೊಸ ತಾರಾ ಬಳಗ ಹೊಂದಿರುವ ಚಿತ್ರದಲ್ಲಿದೀಕ್ಷಿತ್ ಕೆ ಅಂಡಿಂಜೆ , ನೀರಜ್ ಕುಂಜರ್ಪ ಮೋಹನ್ ಶೇಣಿ ಮಿಥುನ್ ರಾಜ್ , ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ , ನವೀನ್ ಬೋಂದೆಲ್ , ಯೋಗೀಶ್ ಶೆಟ್ಟಿ , ಚೇತನ್ ಪಿಲಾರ್ ,ತಿಮ್ಮಪ್ಪ ಕುಲಾಲ್ ಮುಂತಾದವರು ಬಣ್ಣ ಹಚ್ಚಿದ್ದು ಜನರ ಆಶೀರ್ವಾದಕ್ಕೆ ಕಾಯುತ್ತಿದ್ದಾರೆ.

ಹೊಸ ತಂಡವಾಗಿ ಕಂಡರು ಈಗಾಗಲೇ‌ ವೆಬ್ ಸಿರೀಸ್, ತುಳು, ಕನ್ನಡ ಚಲನಚಿತ್ರಲ್ಲಿ ಕೆಲಸ‌ ಮಾಡಿದ ಅನುಭವ ಇರುವ ದಸ್ಕತ್ ತಂಡ ಹೊಸತನವನ್ನ ನೀಡಿ, ತುಳು ಚಲನಚಿತ್ರ ರಂಗದಲ್ಲೊಂದು ಮೈಲಿಗಲ್ಲು ನಿರ್ಮಿಸಲು ಕಾತುರದಿಂದ ಕಾದಿದ್ದಾರೆ.ಮಣ್ಣಿನ‌ ಸೊಗಡಿನ ದಸ್ಕತ್ ನಮ್ಮೆಲ್ಲರ ಮನಸ್ಸಲ್ಲಿ ಸಹಿ ಹಾಕುವಲ್ಲಿ ನಾವೆಲ್ಲ ಜೊತೆಗಿರುವ, ತುಳು ಚಲನಚಿತ್ರ ಗೆದ್ದು ದಸ್ಕತ್ ತಂಡ ವಿಜಯಿಯಾಗಿ, ತುಳು ನೆಲದ ಮಹತ್ವ ಊರಿಡೀ ಹರಡಲಿ ಎನ್ನುವ ಹಾರೈಕೆ ನಮ್ಮದು.

Related posts

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಸೂಕ್ತ ಕ್ರಮಕ್ಕೆ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ, ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya
error: Content is protected !!