25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನ. 11 ರಂದು ಶ್ರೀ ಕ್ಷೇತ್ರ ವಠಾರದಲ್ಲಿ ಮಹಿಳಾ ಸಮಿತಿ ವತಿಯಿಂದ ಮಹಿಳಾ ಸೇವಾ ಸಿರಿ ಕಾರ್ಯಕ್ರಮ ನಡೆಯಿತು.


ಶ್ರೀ ಕ್ಷೇತ್ರದಲ್ಲಿ ಜನವರಿ 07 ರಿಂದ 12 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವ ತಯಾರಿ ಬಗ್ಗೆ ದಿಕ್ಸೂಚಿ ಭಾಷಣಗೈದ ಶ್ರೀ ಕ್ಷೇತ್ರ ಧರ್ಮಸ್ಥಳ ಕೃಷಿ ವಿಭಾಗ ಮುಖ್ಯಸ್ಥರಾದ ಬಜಗುತ್ತು ಬಾಲಕೃಷ್ಣ ಪೂಜಾರಿಯವರು ಮಾತನಾಡುತ್ತ ಬ್ರಹ್ಮಕಲಶೋತ್ಸವದ ತಯಾರಿಯಲ್ಲಿ ಮಹಿಳಾ ಸಮಿತಿಯ ಎಲ್ಲಾ ಸದಸ್ಯರು ಸಂಘಟನಾತ್ಮಕವಾಗಿ ತೊಡಗಿಸಿಕೊಂಡು ದೇವರ ಪುಣ್ಯ ದ ಕಾರ್ಯದಲ್ಲಿ ಭಾಗಿಯಾಗುವುದು ಮುಖ್ಯ. ದೇವಸ್ಥಾನದಲ್ಲಿ ಇನ್ನೂ ಅನೇಕ ಕಾರ್ಯಗಳು ನಡೆಯಬೇಕಿದ್ದು ಇದರಲ್ಲಿ ಮಹಿಳೆಯರ ಜವಾಬ್ದಾರಿಯು ಪ್ರಮುಖವಾಗಿರುತ್ತದೆ. ಅಡಗಿಸಿಕೊಳ್ಳಬೇಡಿ ತೊಡಗಿಸಿಕೊಳ್ಳಿ ಎಂದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.


ಉಜಿರೆ ಸಂಧ್ಯಾ ಟ್ರೇಡರ್ಸ್ ನ ಉದ್ಯಮಿಗಳಾದ ಅರ್ಚನಾ ರಾಜೇಶ್ ಪೈ ಯವರು ಮಾತನಾಡುತ್ತ ಒಬ್ಬ ಮಹಿಳೆಯಿಂದ ಎಲ್ಲಾ ಕೆಲಸವೂ ಸಾಧ್ಯ. ನಾಯಕತ್ವ ವಹಿಸುವಲ್ಲಿ ಮಹಿಳೆಯರು ಮಂಚೂಣಿಯಲ್ಲಿರುತ್ತಾರೆ. ನಾಯಕತ್ವವನ್ನು ಸರಿಯಾಗಿ ನಿಭಾಯಿಸಿಕೊಂಡು ಹೋದಲ್ಲಿ ಯಶಸ್ಸು ಖಂಡಿತ ಸಾಧ್ಯ. ದೇವಸ್ಥಾನ ಅಭಿವೃದ್ಧಿಯಾದಲ್ಲಿ ಊರು, ಮನೆ ಅಭಿವೃದ್ಧಿಯಾಗುತ್ತದೆ. ಎಲ್ಲರ ಸೇವೆ ಸಹಕಾರ ಅಮೂಲ್ಯವಾಗಿರುತ್ತದೆ. ಎಲ್ಲರೂ ಸಮಾನ ಮನಸ್ಕರಾಗಿ ದೇವರ ಸೇವೆಯಲ್ಲಿ ಪಾಲ್ಗೊಳ್ಳಿ ಎಂದು ಮಾರ್ಗದರ್ಶನ ನೀಡಿದರು.


ಸಭಾಧ್ಯಕ್ಷತೆಯನ್ನು ಮಹಿಳಾ ಸಮಿತಿಯ ಅಧ್ಯಕ್ಷೆ ಶ್ವೇತಾ ಮಾತನಾಡಿ, ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದ್ದು ಸಹಕರಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ ಬ್ರಹ್ಮಕಲಶೋತ್ಸವ ಸಮಿತಿಯ ಮಹಿಳಾ ಸಂಚಾಲಕರಾದ ಯಮುನಾ ಕುರುಡಂಗೆ, ಮಹಿಳಾ ಸಮಿತಿಯ ಕಾರ್ಯದರ್ಶಿ ಮೌನಶ್ರೀ, ಬ್ರಹ್ಮಕಲಶೋತ್ಸವ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ಶ್ರೇಯ ಕೆ.ಜೆ ಯವರು ಕಾರ್ಯಕ್ರಮ ನಿರೂಪಿಸಿ, ರಾಜೀವಿ ತಾರಕೆರೆ ಸ್ವಾಗತಿಸಿ, ಯಶೋಧ ಅಡ್ಡಾರು ವಂದಿಸಿದರು.

Related posts

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya
error: Content is protected !!