23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

ಬೆಳ್ತಂಗಡಿ: ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡು ಉತ್ತಮ ಮಾತುಕತೆ ನಡೆಸುವ ಕೌಶಲ್ಯವನ್ನು ರೂಢಿಸಿಕೊಳ್ಳಬೇಕು ಎಂದು ಮೂಡಬಿದ್ರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ವಿಕ್ರಮ್ ನಾಯಕ್. ಕೆ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ಆಯ್ದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರೆಸೆಂಟೇಶನ್ ಸ್ಕಿಲ್ಸ್ ವಿಷಯದ ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳು ಎಲ್ಲಾ ವಿಷಯದಲ್ಲಿ ಅಪಾರ ಜ್ಞಾನವನ್ನು ಗಳಿಸಿಕೊಂಡು ಅತ್ಯುತ್ತಮ ರೀತಿಯಲ್ಲಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಗಳಿಸಿಕೊಳ್ಳಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ಸಾಹಿತ್ಯ ಸಂಘದ ಸಂಯೋಜಕ ವಿನೀಶ್ ಉಪಸ್ಥಿತರಿದ್ದರು.


ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ಸಿಧ್ಧಿ. ಆರ್ ಪ್ರಭು ಸ್ವಾಗತಿಸಿದರು. ಶಿವಾನಿ ಧನ್ಯವಾದವಿತ್ತರು. ವಿಭಾ ಕಾರ್ಯಕ್ರಮ ನಿರೂಪಿಸಿದರು.

Related posts

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya

ಕಲ್ಮಂಜ: ಬೂತ್ 89ರ ಪಂ. ಮಾಜಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ಕೆಸರೊಡೊಂಜಿ ದಿನದ ಸಂಭ್ರಮ

Suddi Udaya
error: Content is protected !!