27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

ಶಿಶಿಲ: ಇಲ್ಲಿಯ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯವು ನ.11 ರಂದು ನಡೆಸಲಾಯಿತು.

ಶ್ರಮದಾನದ ಸಂದರ್ಭದಲ್ಲಿ ಭೇಟಿ ನೀಡಿದ ಬೆಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಪದ್ಮನಾಭ ಗೋಖಲೆ ತಂಡದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ತನ್ನಿಂದಾದ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.


ಬಳಿಕ ಶಿಶಿಲ ಗ್ರಾಮಕ್ಕೆ ಬಂದಿದ್ದ ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ ಶ್ರಮದಾನದ ಸ್ಥಳಕ್ಕೆ ಭೇಟಿ ನೀಡಿ ಘಟಕದ ಸೇವಾ ಚಟುವಟಿಕೆಗಳನ್ನು ಗಮನಿಸುತ್ತಿದ್ದು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಸ್ವಯಂಸೇವಕರಾದ ಉಮೇಶ್ ಗೌಡ ದೇನೋಡಿ, ಶೀನಪ್ಪ ನಾಯ್ಕ್ ಮುಚ್ಚಿರಡ್ಕ, ಕೃಷ್ಣಪ್ಪ ಗೌಡ ಮುಚ್ಚಿರಡ್ಕ,
ಅವಿನಾಶ್ ಭಿಡೆ, ರಾಧಾಕೃಷ್ಣ ಗುತ್ತು, ರಶ್ಮಿತಾ, ಕಿರಣ್ ಸಂಕೇಶ, ರಮೇಶ ಬೈರಕಟ್ಟ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.


ಆಶಾ ಕಾರ್ಯಕರ್ತೆಯರಾದ ಶ್ರೀಮತಿ ರೂಪಾ ಹಾಗೂ ಶ್ರೀಮತಿ ಭಾಗೀರಥಿ, ಶ್ರೀಮತಿ ರಮಾ ಗೋಖಲೆ ಹಾಗೂ ಮನೆಯವರು ಸಹಕರಿಸಿದರು..

Related posts

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!