September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

ಶಿಶಿಲ: ಇಲ್ಲಿಯ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯವು ನ.11 ರಂದು ನಡೆಸಲಾಯಿತು.

ಶ್ರಮದಾನದ ಸಂದರ್ಭದಲ್ಲಿ ಭೇಟಿ ನೀಡಿದ ಬೆಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಪದ್ಮನಾಭ ಗೋಖಲೆ ತಂಡದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ತನ್ನಿಂದಾದ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.


ಬಳಿಕ ಶಿಶಿಲ ಗ್ರಾಮಕ್ಕೆ ಬಂದಿದ್ದ ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ ಶ್ರಮದಾನದ ಸ್ಥಳಕ್ಕೆ ಭೇಟಿ ನೀಡಿ ಘಟಕದ ಸೇವಾ ಚಟುವಟಿಕೆಗಳನ್ನು ಗಮನಿಸುತ್ತಿದ್ದು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಸ್ವಯಂಸೇವಕರಾದ ಉಮೇಶ್ ಗೌಡ ದೇನೋಡಿ, ಶೀನಪ್ಪ ನಾಯ್ಕ್ ಮುಚ್ಚಿರಡ್ಕ, ಕೃಷ್ಣಪ್ಪ ಗೌಡ ಮುಚ್ಚಿರಡ್ಕ,
ಅವಿನಾಶ್ ಭಿಡೆ, ರಾಧಾಕೃಷ್ಣ ಗುತ್ತು, ರಶ್ಮಿತಾ, ಕಿರಣ್ ಸಂಕೇಶ, ರಮೇಶ ಬೈರಕಟ್ಟ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.


ಆಶಾ ಕಾರ್ಯಕರ್ತೆಯರಾದ ಶ್ರೀಮತಿ ರೂಪಾ ಹಾಗೂ ಶ್ರೀಮತಿ ಭಾಗೀರಥಿ, ಶ್ರೀಮತಿ ರಮಾ ಗೋಖಲೆ ಹಾಗೂ ಮನೆಯವರು ಸಹಕರಿಸಿದರು..

Related posts

ನಾವೂರಿನಲ್ಲಿ ಮೀಲಾದ್ ರ‍್ಯಾಲಿ ಕಾರ್ಯಕ್ರಮಕ್ಕೆ ನವೋದಯ ಯುವಕ ಮಂಡಲ ವತಿಯಿಂದ ಸಿಹಿ ತಿಂಡಿ ವಿತರಣೆ: ಸೌಹಾರ್ದತೆಯ ಸಂದೇಶ ಸಾರಿದ ನೆಬಿದಿನ ರ‍್ಯಾಲಿ

Suddi Udaya

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya
error: Content is protected !!