April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

ಬೆಳ್ತಂಗಡಿ: ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಕಸ್ತೂರಿರಂಗನ್ ವರದಿ ಹಾಗು ಅದರ ಆಧಾರವಾಗಿರುವ ಗಾಡ್ಗಿಲ್ ವರದಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಅಳವಡಿಸಲು ಅಧಿಕಾರಿಗಳು ವಿಫಲಾರಾಗಿದ್ದು, ಪರಿಣಾಮವಾಗಿ ಕೃಷಿ ಭೂಮಿಗಳನ್ನು ಅರಣ್ಯ ಎಂದು ತಪ್ಪಾಗಿ ಮಾಪನಮಾಡಿದ್ದಾರೆ. ಇದರ ಆತಂಕಗಳಿಂದ ಕೃಷಿಕರ, ರೈತರ ಭೂಮಿಯ ಮೇಲಿನ ತಮ್ಮ ಹಕ್ಕು ಸಂರಕ್ಷಣೆಗೆ ನಡೆಸುವ ಹೋರಾಟಕ್ಕೆ ಮಲೆನಾಡು ಸಂರಕ್ಷಣಾ ವೇದಿಕೆಗೆ ಸಾರ್ವಜನಿಕರು ಬೆಂಬಲ ನೀಡುವಂತೆ ತಿಳಿಸಿದ್ದಾರೆ.

ಮಲೆನಾಡಿನ ಜನತೆ ಎಚ್ಚೆತ್ತು, ಜಾತಿ, ಧರ್ಮ, ಪಂಗಡ, ಪಕ್ಷಗಳನ್ನು ಮರೆತು ಮಣ್ಣಿನ ಸಂರಕ್ಷಣೆಗೆ ಹೋರಾಟಕಿಳಿಯೋಣ. ಮಲೆನಾಡಿನ ಮಣ್ಣನ್ನು ಕೃಷಿರೀತಿಗಳನ್ನು ಸರಿಯಾಗಿ ತಿಳಿಯದೆ ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಈ ಹೋರಾಟವನ್ನು ಮುನ್ನಡೆಸೋಣ. ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಬ್ರಹತ್ ಸಮ್ಮೇಳನಕ್ಕೆ ಸಾರ್ವಜನಿಕರೆಲ್ಲರು ಭಾಗವಹಿಸಿ ನಮ್ಮ ಹಕ್ಕು ಸಂರಕ್ಷಣೆಗಾಗಿ ಹೋರಾಡೋಣ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯ ಮಾಧ್ಯಮ ನಿರ್ದೇಶಕ ಫಾ| ಸುನಿಲ್ ಐಸಕ್ ತಿಳಿಸಿದ್ದಾರೆ.

Related posts

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!