23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

ಬೆಳ್ತಂಗಡಿ: ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಕಸ್ತೂರಿರಂಗನ್ ವರದಿ ಹಾಗು ಅದರ ಆಧಾರವಾಗಿರುವ ಗಾಡ್ಗಿಲ್ ವರದಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಅಳವಡಿಸಲು ಅಧಿಕಾರಿಗಳು ವಿಫಲಾರಾಗಿದ್ದು, ಪರಿಣಾಮವಾಗಿ ಕೃಷಿ ಭೂಮಿಗಳನ್ನು ಅರಣ್ಯ ಎಂದು ತಪ್ಪಾಗಿ ಮಾಪನಮಾಡಿದ್ದಾರೆ. ಇದರ ಆತಂಕಗಳಿಂದ ಕೃಷಿಕರ, ರೈತರ ಭೂಮಿಯ ಮೇಲಿನ ತಮ್ಮ ಹಕ್ಕು ಸಂರಕ್ಷಣೆಗೆ ನಡೆಸುವ ಹೋರಾಟಕ್ಕೆ ಮಲೆನಾಡು ಸಂರಕ್ಷಣಾ ವೇದಿಕೆಗೆ ಸಾರ್ವಜನಿಕರು ಬೆಂಬಲ ನೀಡುವಂತೆ ತಿಳಿಸಿದ್ದಾರೆ.

ಮಲೆನಾಡಿನ ಜನತೆ ಎಚ್ಚೆತ್ತು, ಜಾತಿ, ಧರ್ಮ, ಪಂಗಡ, ಪಕ್ಷಗಳನ್ನು ಮರೆತು ಮಣ್ಣಿನ ಸಂರಕ್ಷಣೆಗೆ ಹೋರಾಟಕಿಳಿಯೋಣ. ಮಲೆನಾಡಿನ ಮಣ್ಣನ್ನು ಕೃಷಿರೀತಿಗಳನ್ನು ಸರಿಯಾಗಿ ತಿಳಿಯದೆ ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಈ ಹೋರಾಟವನ್ನು ಮುನ್ನಡೆಸೋಣ. ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಬ್ರಹತ್ ಸಮ್ಮೇಳನಕ್ಕೆ ಸಾರ್ವಜನಿಕರೆಲ್ಲರು ಭಾಗವಹಿಸಿ ನಮ್ಮ ಹಕ್ಕು ಸಂರಕ್ಷಣೆಗಾಗಿ ಹೋರಾಡೋಣ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯ ಮಾಧ್ಯಮ ನಿರ್ದೇಶಕ ಫಾ| ಸುನಿಲ್ ಐಸಕ್ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya
error: Content is protected !!