September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

ಬೆಳ್ತಂಗಡಿ: ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಕಸ್ತೂರಿರಂಗನ್ ವರದಿ ಹಾಗು ಅದರ ಆಧಾರವಾಗಿರುವ ಗಾಡ್ಗಿಲ್ ವರದಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಅಳವಡಿಸಲು ಅಧಿಕಾರಿಗಳು ವಿಫಲಾರಾಗಿದ್ದು, ಪರಿಣಾಮವಾಗಿ ಕೃಷಿ ಭೂಮಿಗಳನ್ನು ಅರಣ್ಯ ಎಂದು ತಪ್ಪಾಗಿ ಮಾಪನಮಾಡಿದ್ದಾರೆ. ಇದರ ಆತಂಕಗಳಿಂದ ಕೃಷಿಕರ, ರೈತರ ಭೂಮಿಯ ಮೇಲಿನ ತಮ್ಮ ಹಕ್ಕು ಸಂರಕ್ಷಣೆಗೆ ನಡೆಸುವ ಹೋರಾಟಕ್ಕೆ ಮಲೆನಾಡು ಸಂರಕ್ಷಣಾ ವೇದಿಕೆಗೆ ಸಾರ್ವಜನಿಕರು ಬೆಂಬಲ ನೀಡುವಂತೆ ತಿಳಿಸಿದ್ದಾರೆ.

ಮಲೆನಾಡಿನ ಜನತೆ ಎಚ್ಚೆತ್ತು, ಜಾತಿ, ಧರ್ಮ, ಪಂಗಡ, ಪಕ್ಷಗಳನ್ನು ಮರೆತು ಮಣ್ಣಿನ ಸಂರಕ್ಷಣೆಗೆ ಹೋರಾಟಕಿಳಿಯೋಣ. ಮಲೆನಾಡಿನ ಮಣ್ಣನ್ನು ಕೃಷಿರೀತಿಗಳನ್ನು ಸರಿಯಾಗಿ ತಿಳಿಯದೆ ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಈ ಹೋರಾಟವನ್ನು ಮುನ್ನಡೆಸೋಣ. ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಬ್ರಹತ್ ಸಮ್ಮೇಳನಕ್ಕೆ ಸಾರ್ವಜನಿಕರೆಲ್ಲರು ಭಾಗವಹಿಸಿ ನಮ್ಮ ಹಕ್ಕು ಸಂರಕ್ಷಣೆಗಾಗಿ ಹೋರಾಡೋಣ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯ ಮಾಧ್ಯಮ ನಿರ್ದೇಶಕ ಫಾ| ಸುನಿಲ್ ಐಸಕ್ ತಿಳಿಸಿದ್ದಾರೆ.

Related posts

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಬುರುಡೆ ಪ್ರಕರಣ: ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya
error: Content is protected !!