22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

ಬೆಳ್ತಂಗಡಿ: ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಕಸ್ತೂರಿರಂಗನ್ ವರದಿ ಹಾಗು ಅದರ ಆಧಾರವಾಗಿರುವ ಗಾಡ್ಗಿಲ್ ವರದಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಅಳವಡಿಸಲು ಅಧಿಕಾರಿಗಳು ವಿಫಲಾರಾಗಿದ್ದು, ಪರಿಣಾಮವಾಗಿ ಕೃಷಿ ಭೂಮಿಗಳನ್ನು ಅರಣ್ಯ ಎಂದು ತಪ್ಪಾಗಿ ಮಾಪನಮಾಡಿದ್ದಾರೆ. ಇದರ ಆತಂಕಗಳಿಂದ ಕೃಷಿಕರ, ರೈತರ ಭೂಮಿಯ ಮೇಲಿನ ತಮ್ಮ ಹಕ್ಕು ಸಂರಕ್ಷಣೆಗೆ ನಡೆಸುವ ಹೋರಾಟಕ್ಕೆ ಮಲೆನಾಡು ಸಂರಕ್ಷಣಾ ವೇದಿಕೆಗೆ ಸಾರ್ವಜನಿಕರು ಬೆಂಬಲ ನೀಡುವಂತೆ ತಿಳಿಸಿದ್ದಾರೆ.

ಮಲೆನಾಡಿನ ಜನತೆ ಎಚ್ಚೆತ್ತು, ಜಾತಿ, ಧರ್ಮ, ಪಂಗಡ, ಪಕ್ಷಗಳನ್ನು ಮರೆತು ಮಣ್ಣಿನ ಸಂರಕ್ಷಣೆಗೆ ಹೋರಾಟಕಿಳಿಯೋಣ. ಮಲೆನಾಡಿನ ಮಣ್ಣನ್ನು ಕೃಷಿರೀತಿಗಳನ್ನು ಸರಿಯಾಗಿ ತಿಳಿಯದೆ ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಈ ಹೋರಾಟವನ್ನು ಮುನ್ನಡೆಸೋಣ. ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಬ್ರಹತ್ ಸಮ್ಮೇಳನಕ್ಕೆ ಸಾರ್ವಜನಿಕರೆಲ್ಲರು ಭಾಗವಹಿಸಿ ನಮ್ಮ ಹಕ್ಕು ಸಂರಕ್ಷಣೆಗಾಗಿ ಹೋರಾಡೋಣ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯ ಮಾಧ್ಯಮ ನಿರ್ದೇಶಕ ಫಾ| ಸುನಿಲ್ ಐಸಕ್ ತಿಳಿಸಿದ್ದಾರೆ.

Related posts

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya

ಚಾರ್ಮಾಡಿ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಸಂಪೂರ್ಣ ಸುಟ್ಟು ಹೋದ ಮೆಕ್ಕೆಜೋಳದ ಲಾರಿ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya
error: Content is protected !!