September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನ. 11 ರಂದು ಶ್ರೀ ಕ್ಷೇತ್ರ ವಠಾರದಲ್ಲಿ ಮಹಿಳಾ ಸಮಿತಿ ವತಿಯಿಂದ ಮಹಿಳಾ ಸೇವಾ ಸಿರಿ ಕಾರ್ಯಕ್ರಮ ನಡೆಯಿತು.


ಶ್ರೀ ಕ್ಷೇತ್ರದಲ್ಲಿ ಜನವರಿ 07 ರಿಂದ 12 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವ ತಯಾರಿ ಬಗ್ಗೆ ದಿಕ್ಸೂಚಿ ಭಾಷಣಗೈದ ಶ್ರೀ ಕ್ಷೇತ್ರ ಧರ್ಮಸ್ಥಳ ಕೃಷಿ ವಿಭಾಗ ಮುಖ್ಯಸ್ಥರಾದ ಬಜಗುತ್ತು ಬಾಲಕೃಷ್ಣ ಪೂಜಾರಿಯವರು ಮಾತನಾಡುತ್ತ ಬ್ರಹ್ಮಕಲಶೋತ್ಸವದ ತಯಾರಿಯಲ್ಲಿ ಮಹಿಳಾ ಸಮಿತಿಯ ಎಲ್ಲಾ ಸದಸ್ಯರು ಸಂಘಟನಾತ್ಮಕವಾಗಿ ತೊಡಗಿಸಿಕೊಂಡು ದೇವರ ಪುಣ್ಯ ದ ಕಾರ್ಯದಲ್ಲಿ ಭಾಗಿಯಾಗುವುದು ಮುಖ್ಯ. ದೇವಸ್ಥಾನದಲ್ಲಿ ಇನ್ನೂ ಅನೇಕ ಕಾರ್ಯಗಳು ನಡೆಯಬೇಕಿದ್ದು ಇದರಲ್ಲಿ ಮಹಿಳೆಯರ ಜವಾಬ್ದಾರಿಯು ಪ್ರಮುಖವಾಗಿರುತ್ತದೆ. ಅಡಗಿಸಿಕೊಳ್ಳಬೇಡಿ ತೊಡಗಿಸಿಕೊಳ್ಳಿ ಎಂದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.


ಉಜಿರೆ ಸಂಧ್ಯಾ ಟ್ರೇಡರ್ಸ್ ನ ಉದ್ಯಮಿಗಳಾದ ಅರ್ಚನಾ ರಾಜೇಶ್ ಪೈ ಯವರು ಮಾತನಾಡುತ್ತ ಒಬ್ಬ ಮಹಿಳೆಯಿಂದ ಎಲ್ಲಾ ಕೆಲಸವೂ ಸಾಧ್ಯ. ನಾಯಕತ್ವ ವಹಿಸುವಲ್ಲಿ ಮಹಿಳೆಯರು ಮಂಚೂಣಿಯಲ್ಲಿರುತ್ತಾರೆ. ನಾಯಕತ್ವವನ್ನು ಸರಿಯಾಗಿ ನಿಭಾಯಿಸಿಕೊಂಡು ಹೋದಲ್ಲಿ ಯಶಸ್ಸು ಖಂಡಿತ ಸಾಧ್ಯ. ದೇವಸ್ಥಾನ ಅಭಿವೃದ್ಧಿಯಾದಲ್ಲಿ ಊರು, ಮನೆ ಅಭಿವೃದ್ಧಿಯಾಗುತ್ತದೆ. ಎಲ್ಲರ ಸೇವೆ ಸಹಕಾರ ಅಮೂಲ್ಯವಾಗಿರುತ್ತದೆ. ಎಲ್ಲರೂ ಸಮಾನ ಮನಸ್ಕರಾಗಿ ದೇವರ ಸೇವೆಯಲ್ಲಿ ಪಾಲ್ಗೊಳ್ಳಿ ಎಂದು ಮಾರ್ಗದರ್ಶನ ನೀಡಿದರು.


ಸಭಾಧ್ಯಕ್ಷತೆಯನ್ನು ಮಹಿಳಾ ಸಮಿತಿಯ ಅಧ್ಯಕ್ಷೆ ಶ್ವೇತಾ ಮಾತನಾಡಿ, ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದ್ದು ಸಹಕರಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ ಬ್ರಹ್ಮಕಲಶೋತ್ಸವ ಸಮಿತಿಯ ಮಹಿಳಾ ಸಂಚಾಲಕರಾದ ಯಮುನಾ ಕುರುಡಂಗೆ, ಮಹಿಳಾ ಸಮಿತಿಯ ಕಾರ್ಯದರ್ಶಿ ಮೌನಶ್ರೀ, ಬ್ರಹ್ಮಕಲಶೋತ್ಸವ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ಶ್ರೇಯ ಕೆ.ಜೆ ಯವರು ಕಾರ್ಯಕ್ರಮ ನಿರೂಪಿಸಿ, ರಾಜೀವಿ ತಾರಕೆರೆ ಸ್ವಾಗತಿಸಿ, ಯಶೋಧ ಅಡ್ಡಾರು ವಂದಿಸಿದರು.

Related posts

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಬಾಲಕಿಯರ ಶೌಚಾಲಯ ಕೊಡುಗೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋ ಪ್ರಸಾರ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲು

Suddi Udaya

ಕಳೆಂಜ: ಬರೆಮೇಲು ನಿವಾಸಿ ಗಣಪನ ಗೌಡ ನಿಧನ

Suddi Udaya
error: Content is protected !!