22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನ. 11 ರಂದು ಶ್ರೀ ಕ್ಷೇತ್ರ ವಠಾರದಲ್ಲಿ ಮಹಿಳಾ ಸಮಿತಿ ವತಿಯಿಂದ ಮಹಿಳಾ ಸೇವಾ ಸಿರಿ ಕಾರ್ಯಕ್ರಮ ನಡೆಯಿತು.


ಶ್ರೀ ಕ್ಷೇತ್ರದಲ್ಲಿ ಜನವರಿ 07 ರಿಂದ 12 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವ ತಯಾರಿ ಬಗ್ಗೆ ದಿಕ್ಸೂಚಿ ಭಾಷಣಗೈದ ಶ್ರೀ ಕ್ಷೇತ್ರ ಧರ್ಮಸ್ಥಳ ಕೃಷಿ ವಿಭಾಗ ಮುಖ್ಯಸ್ಥರಾದ ಬಜಗುತ್ತು ಬಾಲಕೃಷ್ಣ ಪೂಜಾರಿಯವರು ಮಾತನಾಡುತ್ತ ಬ್ರಹ್ಮಕಲಶೋತ್ಸವದ ತಯಾರಿಯಲ್ಲಿ ಮಹಿಳಾ ಸಮಿತಿಯ ಎಲ್ಲಾ ಸದಸ್ಯರು ಸಂಘಟನಾತ್ಮಕವಾಗಿ ತೊಡಗಿಸಿಕೊಂಡು ದೇವರ ಪುಣ್ಯ ದ ಕಾರ್ಯದಲ್ಲಿ ಭಾಗಿಯಾಗುವುದು ಮುಖ್ಯ. ದೇವಸ್ಥಾನದಲ್ಲಿ ಇನ್ನೂ ಅನೇಕ ಕಾರ್ಯಗಳು ನಡೆಯಬೇಕಿದ್ದು ಇದರಲ್ಲಿ ಮಹಿಳೆಯರ ಜವಾಬ್ದಾರಿಯು ಪ್ರಮುಖವಾಗಿರುತ್ತದೆ. ಅಡಗಿಸಿಕೊಳ್ಳಬೇಡಿ ತೊಡಗಿಸಿಕೊಳ್ಳಿ ಎಂದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.


ಉಜಿರೆ ಸಂಧ್ಯಾ ಟ್ರೇಡರ್ಸ್ ನ ಉದ್ಯಮಿಗಳಾದ ಅರ್ಚನಾ ರಾಜೇಶ್ ಪೈ ಯವರು ಮಾತನಾಡುತ್ತ ಒಬ್ಬ ಮಹಿಳೆಯಿಂದ ಎಲ್ಲಾ ಕೆಲಸವೂ ಸಾಧ್ಯ. ನಾಯಕತ್ವ ವಹಿಸುವಲ್ಲಿ ಮಹಿಳೆಯರು ಮಂಚೂಣಿಯಲ್ಲಿರುತ್ತಾರೆ. ನಾಯಕತ್ವವನ್ನು ಸರಿಯಾಗಿ ನಿಭಾಯಿಸಿಕೊಂಡು ಹೋದಲ್ಲಿ ಯಶಸ್ಸು ಖಂಡಿತ ಸಾಧ್ಯ. ದೇವಸ್ಥಾನ ಅಭಿವೃದ್ಧಿಯಾದಲ್ಲಿ ಊರು, ಮನೆ ಅಭಿವೃದ್ಧಿಯಾಗುತ್ತದೆ. ಎಲ್ಲರ ಸೇವೆ ಸಹಕಾರ ಅಮೂಲ್ಯವಾಗಿರುತ್ತದೆ. ಎಲ್ಲರೂ ಸಮಾನ ಮನಸ್ಕರಾಗಿ ದೇವರ ಸೇವೆಯಲ್ಲಿ ಪಾಲ್ಗೊಳ್ಳಿ ಎಂದು ಮಾರ್ಗದರ್ಶನ ನೀಡಿದರು.


ಸಭಾಧ್ಯಕ್ಷತೆಯನ್ನು ಮಹಿಳಾ ಸಮಿತಿಯ ಅಧ್ಯಕ್ಷೆ ಶ್ವೇತಾ ಮಾತನಾಡಿ, ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದ್ದು ಸಹಕರಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ ಬ್ರಹ್ಮಕಲಶೋತ್ಸವ ಸಮಿತಿಯ ಮಹಿಳಾ ಸಂಚಾಲಕರಾದ ಯಮುನಾ ಕುರುಡಂಗೆ, ಮಹಿಳಾ ಸಮಿತಿಯ ಕಾರ್ಯದರ್ಶಿ ಮೌನಶ್ರೀ, ಬ್ರಹ್ಮಕಲಶೋತ್ಸವ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ಶ್ರೇಯ ಕೆ.ಜೆ ಯವರು ಕಾರ್ಯಕ್ರಮ ನಿರೂಪಿಸಿ, ರಾಜೀವಿ ತಾರಕೆರೆ ಸ್ವಾಗತಿಸಿ, ಯಶೋಧ ಅಡ್ಡಾರು ವಂದಿಸಿದರು.

Related posts

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya
error: Content is protected !!