22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

ಶಿಶಿಲ: ಇಲ್ಲಿಯ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯವು ನ.11 ರಂದು ನಡೆಸಲಾಯಿತು.

ಶ್ರಮದಾನದ ಸಂದರ್ಭದಲ್ಲಿ ಭೇಟಿ ನೀಡಿದ ಬೆಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಪದ್ಮನಾಭ ಗೋಖಲೆ ತಂಡದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ತನ್ನಿಂದಾದ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.


ಬಳಿಕ ಶಿಶಿಲ ಗ್ರಾಮಕ್ಕೆ ಬಂದಿದ್ದ ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ ಶ್ರಮದಾನದ ಸ್ಥಳಕ್ಕೆ ಭೇಟಿ ನೀಡಿ ಘಟಕದ ಸೇವಾ ಚಟುವಟಿಕೆಗಳನ್ನು ಗಮನಿಸುತ್ತಿದ್ದು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಸ್ವಯಂಸೇವಕರಾದ ಉಮೇಶ್ ಗೌಡ ದೇನೋಡಿ, ಶೀನಪ್ಪ ನಾಯ್ಕ್ ಮುಚ್ಚಿರಡ್ಕ, ಕೃಷ್ಣಪ್ಪ ಗೌಡ ಮುಚ್ಚಿರಡ್ಕ,
ಅವಿನಾಶ್ ಭಿಡೆ, ರಾಧಾಕೃಷ್ಣ ಗುತ್ತು, ರಶ್ಮಿತಾ, ಕಿರಣ್ ಸಂಕೇಶ, ರಮೇಶ ಬೈರಕಟ್ಟ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.


ಆಶಾ ಕಾರ್ಯಕರ್ತೆಯರಾದ ಶ್ರೀಮತಿ ರೂಪಾ ಹಾಗೂ ಶ್ರೀಮತಿ ಭಾಗೀರಥಿ, ಶ್ರೀಮತಿ ರಮಾ ಗೋಖಲೆ ಹಾಗೂ ಮನೆಯವರು ಸಹಕರಿಸಿದರು..

Related posts

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

Suddi Udaya
error: Content is protected !!