25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

ಬೆಳ್ತಂಗಡಿ: ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಕಸ್ತೂರಿರಂಗನ್ ವರದಿ ಹಾಗು ಅದರ ಆಧಾರವಾಗಿರುವ ಗಾಡ್ಗಿಲ್ ವರದಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಅಳವಡಿಸಲು ಅಧಿಕಾರಿಗಳು ವಿಫಲಾರಾಗಿದ್ದು, ಪರಿಣಾಮವಾಗಿ ಕೃಷಿ ಭೂಮಿಗಳನ್ನು ಅರಣ್ಯ ಎಂದು ತಪ್ಪಾಗಿ ಮಾಪನಮಾಡಿದ್ದಾರೆ. ಇದರ ಆತಂಕಗಳಿಂದ ಕೃಷಿಕರ, ರೈತರ ಭೂಮಿಯ ಮೇಲಿನ ತಮ್ಮ ಹಕ್ಕು ಸಂರಕ್ಷಣೆಗೆ ನಡೆಸುವ ಹೋರಾಟಕ್ಕೆ ಮಲೆನಾಡು ಸಂರಕ್ಷಣಾ ವೇದಿಕೆಗೆ ಸಾರ್ವಜನಿಕರು ಬೆಂಬಲ ನೀಡುವಂತೆ ತಿಳಿಸಿದ್ದಾರೆ.

ಮಲೆನಾಡಿನ ಜನತೆ ಎಚ್ಚೆತ್ತು, ಜಾತಿ, ಧರ್ಮ, ಪಂಗಡ, ಪಕ್ಷಗಳನ್ನು ಮರೆತು ಮಣ್ಣಿನ ಸಂರಕ್ಷಣೆಗೆ ಹೋರಾಟಕಿಳಿಯೋಣ. ಮಲೆನಾಡಿನ ಮಣ್ಣನ್ನು ಕೃಷಿರೀತಿಗಳನ್ನು ಸರಿಯಾಗಿ ತಿಳಿಯದೆ ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಈ ಹೋರಾಟವನ್ನು ಮುನ್ನಡೆಸೋಣ. ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಬ್ರಹತ್ ಸಮ್ಮೇಳನಕ್ಕೆ ಸಾರ್ವಜನಿಕರೆಲ್ಲರು ಭಾಗವಹಿಸಿ ನಮ್ಮ ಹಕ್ಕು ಸಂರಕ್ಷಣೆಗಾಗಿ ಹೋರಾಡೋಣ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯ ಮಾಧ್ಯಮ ನಿರ್ದೇಶಕ ಫಾ| ಸುನಿಲ್ ಐಸಕ್ ತಿಳಿಸಿದ್ದಾರೆ.

Related posts

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya
error: Content is protected !!