September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

ಬೆಳ್ತಂಗಡಿ: ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಕಸ್ತೂರಿರಂಗನ್ ವರದಿ ಹಾಗು ಅದರ ಆಧಾರವಾಗಿರುವ ಗಾಡ್ಗಿಲ್ ವರದಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಅಳವಡಿಸಲು ಅಧಿಕಾರಿಗಳು ವಿಫಲಾರಾಗಿದ್ದು, ಪರಿಣಾಮವಾಗಿ ಕೃಷಿ ಭೂಮಿಗಳನ್ನು ಅರಣ್ಯ ಎಂದು ತಪ್ಪಾಗಿ ಮಾಪನಮಾಡಿದ್ದಾರೆ. ಇದರ ಆತಂಕಗಳಿಂದ ಕೃಷಿಕರ, ರೈತರ ಭೂಮಿಯ ಮೇಲಿನ ತಮ್ಮ ಹಕ್ಕು ಸಂರಕ್ಷಣೆಗೆ ನಡೆಸುವ ಹೋರಾಟಕ್ಕೆ ಮಲೆನಾಡು ಸಂರಕ್ಷಣಾ ವೇದಿಕೆಗೆ ಸಾರ್ವಜನಿಕರು ಬೆಂಬಲ ನೀಡುವಂತೆ ತಿಳಿಸಿದ್ದಾರೆ.

ಮಲೆನಾಡಿನ ಜನತೆ ಎಚ್ಚೆತ್ತು, ಜಾತಿ, ಧರ್ಮ, ಪಂಗಡ, ಪಕ್ಷಗಳನ್ನು ಮರೆತು ಮಣ್ಣಿನ ಸಂರಕ್ಷಣೆಗೆ ಹೋರಾಟಕಿಳಿಯೋಣ. ಮಲೆನಾಡಿನ ಮಣ್ಣನ್ನು ಕೃಷಿರೀತಿಗಳನ್ನು ಸರಿಯಾಗಿ ತಿಳಿಯದೆ ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಈ ಹೋರಾಟವನ್ನು ಮುನ್ನಡೆಸೋಣ. ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಬ್ರಹತ್ ಸಮ್ಮೇಳನಕ್ಕೆ ಸಾರ್ವಜನಿಕರೆಲ್ಲರು ಭಾಗವಹಿಸಿ ನಮ್ಮ ಹಕ್ಕು ಸಂರಕ್ಷಣೆಗಾಗಿ ಹೋರಾಡೋಣ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯ ಮಾಧ್ಯಮ ನಿರ್ದೇಶಕ ಫಾ| ಸುನಿಲ್ ಐಸಕ್ ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಅಗ್ನಿವೀರ್ ಗೆ ಆಯ್ಕೆಯಾದ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಾರ್ಪಣೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹುತಾತ್ಮ ಮೋಹನ್ ದಾಸನ್ ರವರ ಭಾವಚಿತ್ರ ಅನಾವರಣ

Suddi Udaya
error: Content is protected !!