23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

ಬೆಳ್ತಂಗಡಿ: ತುಳು ಚಲನಚಿತ್ರ ರಂಗದಲ್ಲಿ ಹೊಸತನದ ಅಲೆಯನ್ನ ಸೃಷ್ಟಿ ಮಾಡಿ ಆ ಮುಖೇನ ಪ್ರೇಕ್ಷಕರ ಮನ ಗೆಲ್ಲುವ ತವಕದಲ್ಲಿರುವ ತಂಡ, ತುಳುನಾಡಿನ‌ ಮಣ್ಣಿನ‌ ಸೊಗಡಿನೊಂದಿಗೆ, ಕೇಪುಲ ಪಲ್ಕೆಯ ಕಥೆಯನ್ನ ನಮಗೆ ಊಣಬಡಿಸಿ ನಮ್ಮೆಲ್ಲರ ಮನಸ್ಸಲ್ಲಿ ಸಹಿ ಹಾಕಲು ದಸ್ಕತ್ ತಂಡದವರು ತಯಾರಾಗಿದ್ದಾರೆ.

ಈಗಾಗಲೇ ಬಹುತೇಕ‌ ಸ್ಯಾಂಡಲ್ ವುಡ್, ಕೋಸ್ಟಲ್ ವುಡ್ ನ ದಿಗ್ಗಜರು ಮತ್ತು ನಾಡಿನ‌ ಜನತೆ ಚಲನಚಿತ್ರದ ಟೀಸರ್ ನೋಡಿ ಮೆಚ್ಚಿಕ್ಕೊಂಡಿದ್ದು ಉತ್ತಮವಾದ ಪ್ರತಿಕ್ರಿಯೆಯನ್ನ ನೀಡಿದ್ದಾರೆ, ಸಿನಿಮಾ ಮೇಕಿಂಗ್, ಸಂಗೀತ ಸಂಯೋಜನೆ, ತುಳುನಾಡಿನ‌ ಸಂಸ್ಕೃತಿ‌ ಮತ್ತು‌ ಪಾತ್ರಗಳಲ್ಲಿನ ನೈಜತೆ ಎಲ್ಲರ ಮನಸ್ಸನ್ನ ಗೆದ್ದಿದ್ದು ಚಲನಚಿತ್ರ ಯಾವಾಗ ಬಿಡುಗಡೆ ಅನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಹೆಸರಾಂತ ಗಾಯಕ, ಸಂಗೀತ ನಿರ್ದೇಶಕರಾದ ಡಾ।ಗುರುಕಿರಣ್ ಅವರು ಬಿಡುಗಡೆ ದಿನಾಂಕವನ್ನ ಘೋಷಣೆ ಮಾಡಿದ್ದು ಡಿ.13 ಕ್ಕೆ ತುಳುನಾಡಿನಾದ್ಯಂತ ದಸ್ಕತ್ ತುಳು ಚಿತ್ರ ತೆರೆ ಮೇಲೆ ಅಬ್ಬರಿಸಲಿದೆ.

ಕೃಷ್ಣ ಜೆ ಪಾಲೆಮಾರ್ ಅರ್ಪಿಸುವ ಈ ಚಿತ್ರವನ್ನ ರಾಘವೇಂದ್ರ ಕುಡ್ವ ನಿರ್ಮಿಸಿದ್ದು, ಕಾಮಿಡಿ ಕಿಲಾಡಿ ಖ್ಯಾತಿಯ ಬಹುಮುಖ ಪ್ರತಿಭೆ ಅನೀಶ್ ಪೂಜಾರಿ ವೇಣೂರು ಆಕ್ಷನ್ ಕಟ್ ಹೇಳಿದ್ದಾರೆ. ಛಾಯಾಗ್ರಹಣದಲ್ಲಿ ಸಂತೋಷ್ ಆಚಾರ್ಯ ಗುಂಪಲಾಜೆ, ಸಂಕಲನ ಗಣೇಶ್ ನೀರ್ಚಾಲ್, ಸಂಗೀತ ಸಂಯೋಜನೆಯಲ್ಲಿ ಸಮರ್ಥನ್ ಎಸ್ ರಾವ್ ಜೊತೆಯಾಗಿದ್ದು, ಸ್ಮಿತೇಶ್ ಬಾರ್ಯ, ವಿನೋದ್ ರಾಜ್ ಕಲ್ಮಂಜ, ನಿಶಿತ್ ಶೆಟ್ಟಿ , ಮನೋಜ್ ಆನಂದ್ , ದೀಕ್ಷಿತ್ ಧರ್ಮಸ್ಥಳ ತಂಡದ ಶಕ್ತಿಯಾಗಿದ್ದಾರೆ. ಹೊಸ ತಾರಾ ಬಳಗ ಹೊಂದಿರುವ ಚಿತ್ರದಲ್ಲಿದೀಕ್ಷಿತ್ ಕೆ ಅಂಡಿಂಜೆ , ನೀರಜ್ ಕುಂಜರ್ಪ ಮೋಹನ್ ಶೇಣಿ ಮಿಥುನ್ ರಾಜ್ , ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ , ನವೀನ್ ಬೋಂದೆಲ್ , ಯೋಗೀಶ್ ಶೆಟ್ಟಿ , ಚೇತನ್ ಪಿಲಾರ್ ,ತಿಮ್ಮಪ್ಪ ಕುಲಾಲ್ ಮುಂತಾದವರು ಬಣ್ಣ ಹಚ್ಚಿದ್ದು ಜನರ ಆಶೀರ್ವಾದಕ್ಕೆ ಕಾಯುತ್ತಿದ್ದಾರೆ.

ಹೊಸ ತಂಡವಾಗಿ ಕಂಡರು ಈಗಾಗಲೇ‌ ವೆಬ್ ಸಿರೀಸ್, ತುಳು, ಕನ್ನಡ ಚಲನಚಿತ್ರಲ್ಲಿ ಕೆಲಸ‌ ಮಾಡಿದ ಅನುಭವ ಇರುವ ದಸ್ಕತ್ ತಂಡ ಹೊಸತನವನ್ನ ನೀಡಿ, ತುಳು ಚಲನಚಿತ್ರ ರಂಗದಲ್ಲೊಂದು ಮೈಲಿಗಲ್ಲು ನಿರ್ಮಿಸಲು ಕಾತುರದಿಂದ ಕಾದಿದ್ದಾರೆ.ಮಣ್ಣಿನ‌ ಸೊಗಡಿನ ದಸ್ಕತ್ ನಮ್ಮೆಲ್ಲರ ಮನಸ್ಸಲ್ಲಿ ಸಹಿ ಹಾಕುವಲ್ಲಿ ನಾವೆಲ್ಲ ಜೊತೆಗಿರುವ, ತುಳು ಚಲನಚಿತ್ರ ಗೆದ್ದು ದಸ್ಕತ್ ತಂಡ ವಿಜಯಿಯಾಗಿ, ತುಳು ನೆಲದ ಮಹತ್ವ ಊರಿಡೀ ಹರಡಲಿ ಎನ್ನುವ ಹಾರೈಕೆ ನಮ್ಮದು.

Related posts

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya
error: Content is protected !!