July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

ಬೆಳ್ತಂಗಡಿ: ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡು ಉತ್ತಮ ಮಾತುಕತೆ ನಡೆಸುವ ಕೌಶಲ್ಯವನ್ನು ರೂಢಿಸಿಕೊಳ್ಳಬೇಕು ಎಂದು ಮೂಡಬಿದ್ರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ವಿಕ್ರಮ್ ನಾಯಕ್. ಕೆ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ಆಯ್ದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರೆಸೆಂಟೇಶನ್ ಸ್ಕಿಲ್ಸ್ ವಿಷಯದ ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳು ಎಲ್ಲಾ ವಿಷಯದಲ್ಲಿ ಅಪಾರ ಜ್ಞಾನವನ್ನು ಗಳಿಸಿಕೊಂಡು ಅತ್ಯುತ್ತಮ ರೀತಿಯಲ್ಲಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಗಳಿಸಿಕೊಳ್ಳಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ಸಾಹಿತ್ಯ ಸಂಘದ ಸಂಯೋಜಕ ವಿನೀಶ್ ಉಪಸ್ಥಿತರಿದ್ದರು.


ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ಸಿಧ್ಧಿ. ಆರ್ ಪ್ರಭು ಸ್ವಾಗತಿಸಿದರು. ಶಿವಾನಿ ಧನ್ಯವಾದವಿತ್ತರು. ವಿಭಾ ಕಾರ್ಯಕ್ರಮ ನಿರೂಪಿಸಿದರು.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಶಿಶಿಲ :2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya
error: Content is protected !!