23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದ ಪ್ರಥಮ ಹಂತದ ಸಲಹಾ ಸಮಿತಿ ಸಭೆ ಗ್ರಾ.ಪಂ. ಹಾಗೂ ಸಮಿತಿ ಅಧ್ಯಕ್ಷೆ ಹೇಮಾವತಿ ಎಂ. ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಂಥಾಲಯ ಕಚೇರಿಯಲ್ಲಿ ನಡೆಯಿತು.

ವಿದ್ಯಾರ್ಥಿಗಳನ್ನು ಗ್ರಂಥಾಲಯ ಕೇಂದ್ರಕ್ಕೆ ಸೆಳೆಯುವ, ಪುಸ್ತಕಗಳ ಮೇಲೆ ಅಭಿರುಚಿ ತೋರಲು ಸೂಕ್ತ ಸಲಹೆಗಳನ್ನು ನೀಡಲಾಯಿತು. ಗ್ರಂಥಾಲಯ ಸದ್ರಿ ಕಟ್ಟಡ ಹಳೆಯದಾಗಿದ್ದು ನೂತನ ಕಟ್ಟಡ ನಿರ್ಮಾಣದ ಕುರಿತು ಗ್ರಾಮ ಪಂಚಾಯತ್‌ಗೆ ಪ್ರಸ್ತಾವನೆ ಸಲ್ಲಿಸಲಾಯಿತು. ಗ್ರಾಮ ವ್ಯಾಪ್ತಿಯ ಶಾಲೆಗಳಲ್ಲಿ ಚಟುವಟಿಕೆ, ಮಕ್ಕಳ ಹಬ್ಬ ಆಚರಣೆಯ ಕುರಿತು ಚರ್ಚೆ ನಡೆಯಿತು.

ಸಲಹಾ ಸಮಿತಿ ಸದಸ್ಯರಾದ ಶಾಲಾ ಮುಖ್ಯೋಪಾಧ್ಯಾಯ ಟಿ.ಬಿ.ಬಸವಲಿಂಗಪ್ಪ, ಸ್ಥಳೀಯ ಯುವಕ-ಯುವತಿ ಮಂಡಲ ಪ್ರತಿನಿಧಿಗಳಾದ ಮಿಥುನ್ ಕುಲಾಲ್ ಹಾಗೂ ಮಮತಾ, ಹಿರಿಯ ನಾಗರಿಕ ಕುಶಾಲಪ್ಪ ಗೌಡ, ಶಿಕ್ಷಣ ತಜ್ಞ ಯುವರಾಜ್ ಅನಾರ್, ಪತ್ರಕರ್ತ ಮನೀಶ್ ವಿ.ಅಂಚನ್, ಕೌಶಲಾಭಿವೃದ್ಧಿಯ ಶೋಭಾ, ಗ್ರಂಥಾಲಯ ಮೇಲ್ವಿಚಾರಕಿ ಮೋಹಿನಿ, ವಿದ್ಯಾರ್ಥಿಗಳಾದ ದೀಪಾ, ಅಜೇಯ್, ಜಯಸೂರ್ಯ, ಭವ್ಯಾ, ಸದಸ್ಯ ಕಾರ್ಯರ್ಶಿ ಶ್ರವಣ್ ಕುಮಾರ್, ಗ್ರಾ.ಪಂ.ಕಾರ್ಯದರ್ಶಿ ಆನಂದ ಉಪಸ್ಥಿತರಿದ್ದರು. ಸಿಬ್ಬಂದಿ ಸುಂದರ ನಾಯ್ಕ, ಧರ್ಣಪ್ಪ, ಸೌಮ್ಯಾ, ಸಂಗೀತಾ ಹಾಗೂ ಸೌಮ್ಯಾ ಉಪಸ್ಥಿತರಿದ್ದರು.

Related posts

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya
error: Content is protected !!