23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದ ಪ್ರಥಮ ಹಂತದ ಸಲಹಾ ಸಮಿತಿ ಸಭೆ ಗ್ರಾ.ಪಂ. ಹಾಗೂ ಸಮಿತಿ ಅಧ್ಯಕ್ಷೆ ಹೇಮಾವತಿ ಎಂ. ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಂಥಾಲಯ ಕಚೇರಿಯಲ್ಲಿ ನಡೆಯಿತು.

ವಿದ್ಯಾರ್ಥಿಗಳನ್ನು ಗ್ರಂಥಾಲಯ ಕೇಂದ್ರಕ್ಕೆ ಸೆಳೆಯುವ, ಪುಸ್ತಕಗಳ ಮೇಲೆ ಅಭಿರುಚಿ ತೋರಲು ಸೂಕ್ತ ಸಲಹೆಗಳನ್ನು ನೀಡಲಾಯಿತು. ಗ್ರಂಥಾಲಯ ಸದ್ರಿ ಕಟ್ಟಡ ಹಳೆಯದಾಗಿದ್ದು ನೂತನ ಕಟ್ಟಡ ನಿರ್ಮಾಣದ ಕುರಿತು ಗ್ರಾಮ ಪಂಚಾಯತ್‌ಗೆ ಪ್ರಸ್ತಾವನೆ ಸಲ್ಲಿಸಲಾಯಿತು. ಗ್ರಾಮ ವ್ಯಾಪ್ತಿಯ ಶಾಲೆಗಳಲ್ಲಿ ಚಟುವಟಿಕೆ, ಮಕ್ಕಳ ಹಬ್ಬ ಆಚರಣೆಯ ಕುರಿತು ಚರ್ಚೆ ನಡೆಯಿತು.

ಸಲಹಾ ಸಮಿತಿ ಸದಸ್ಯರಾದ ಶಾಲಾ ಮುಖ್ಯೋಪಾಧ್ಯಾಯ ಟಿ.ಬಿ.ಬಸವಲಿಂಗಪ್ಪ, ಸ್ಥಳೀಯ ಯುವಕ-ಯುವತಿ ಮಂಡಲ ಪ್ರತಿನಿಧಿಗಳಾದ ಮಿಥುನ್ ಕುಲಾಲ್ ಹಾಗೂ ಮಮತಾ, ಹಿರಿಯ ನಾಗರಿಕ ಕುಶಾಲಪ್ಪ ಗೌಡ, ಶಿಕ್ಷಣ ತಜ್ಞ ಯುವರಾಜ್ ಅನಾರ್, ಪತ್ರಕರ್ತ ಮನೀಶ್ ವಿ.ಅಂಚನ್, ಕೌಶಲಾಭಿವೃದ್ಧಿಯ ಶೋಭಾ, ಗ್ರಂಥಾಲಯ ಮೇಲ್ವಿಚಾರಕಿ ಮೋಹಿನಿ, ವಿದ್ಯಾರ್ಥಿಗಳಾದ ದೀಪಾ, ಅಜೇಯ್, ಜಯಸೂರ್ಯ, ಭವ್ಯಾ, ಸದಸ್ಯ ಕಾರ್ಯರ್ಶಿ ಶ್ರವಣ್ ಕುಮಾರ್, ಗ್ರಾ.ಪಂ.ಕಾರ್ಯದರ್ಶಿ ಆನಂದ ಉಪಸ್ಥಿತರಿದ್ದರು. ಸಿಬ್ಬಂದಿ ಸುಂದರ ನಾಯ್ಕ, ಧರ್ಣಪ್ಪ, ಸೌಮ್ಯಾ, ಸಂಗೀತಾ ಹಾಗೂ ಸೌಮ್ಯಾ ಉಪಸ್ಥಿತರಿದ್ದರು.

Related posts

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!