24.4 C
ಪುತ್ತೂರು, ಬೆಳ್ತಂಗಡಿ
May 20, 2025
Uncategorized

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

ಮಾಲಾಡಿ: ಜ್ವರ ಹಾಗೂ ಕೆಮ್ಮುನಿಂದ ಬಳಲುತ್ತಿದ್ದ ಮಾಲಾಡಿ ಗ್ರಾಮದ ನಿವಾಸಿ ಚೇತನ್ (೨೫ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೨ರಂದು ವರದಿಯಾಗಿದೆ.


ಚೇತನ್ ಅವರು ಸುಮಾರು ೧೦-೧೫ ದಿನಗಳಿಂದ ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿದ್ದು ಈ ಬಗ್ಗೆ ಸ್ಥಳಿಯ ವೈದ್ಯರಿಂದ ಔಷದೋಪಚಾರ ಮಾಡಿದರೂ ಕೂಡಾ ಜ್ವರ ಕಡಿಮೆಯಾಗದೇ ಇದ್ದುದರಿಂದ ನ.೧೨ ರಂದು ಮಧ್ಯಾಹ್ನ ಬಂಟ್ವಾಳ ಆಸ್ಪತ್ರೆಗೆ ಹೋಗಿ ಜೌಷಧಿ ತಂದಿದ್ದರು. ಸಂಜೆ ಸಹೋದರ ಮಿಥುನ್ ತನ್ನ ದೊಡ್ಡಪ್ಪನ ಮಕ್ಕಳಾದ ವಿವೇಕ್ ಹಾಗೂ ಅಶೋಕ್ ಕುಮಾರ್ ರವರೊಂದಿಗೆ ಮನೆ ಸಮೀಪವಿರುವ ಸರ್ವಿಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದಲ್ಲಿಗೆ ಬಂದ ಚೇತನ್ ನಾನು ಬಂಟ್ವಾಳ ಆಸ್ಪತ್ರೆಯಿಂದ ಔಷಧಿ ತೆಗೆದುಕೊಂಡು ಬಂದಿದ್ದೇನೆ. ನನಗೆ ತುಂಬಾ ಸುಸ್ತು ಅಗುತ್ತಿದೆ ಎಂದು ಹೇಳುತ್ತಾ, ಒಮ್ಮೆಲೆ ವಾಂತಿ ಮಾಡಲು ಪ್ರಾರಂಭಿಸಿದ್ದು, ಕೂಡಲೇ ಅವರ ಸಹೋದರ ಮಿಥುನ್ ಹಾಗೂ ದೊಡ್ಡಪ್ಪನ ಮಕ್ಕಳು ಉಪಚರಿಸಿ ಚಿಕಿತ್ಸೆ ಬಗ್ಗೆ ಮಡಂತ್ಯಾರಿಗೆ ಕರೆ ತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya
error: Content is protected !!