September 6, 2026
Uncategorized

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

ಮಾಲಾಡಿ: ಜ್ವರ ಹಾಗೂ ಕೆಮ್ಮುನಿಂದ ಬಳಲುತ್ತಿದ್ದ ಮಾಲಾಡಿ ಗ್ರಾಮದ ನಿವಾಸಿ ಚೇತನ್ (೨೫ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೨ರಂದು ವರದಿಯಾಗಿದೆ.


ಚೇತನ್ ಅವರು ಸುಮಾರು ೧೦-೧೫ ದಿನಗಳಿಂದ ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿದ್ದು ಈ ಬಗ್ಗೆ ಸ್ಥಳಿಯ ವೈದ್ಯರಿಂದ ಔಷದೋಪಚಾರ ಮಾಡಿದರೂ ಕೂಡಾ ಜ್ವರ ಕಡಿಮೆಯಾಗದೇ ಇದ್ದುದರಿಂದ ನ.೧೨ ರಂದು ಮಧ್ಯಾಹ್ನ ಬಂಟ್ವಾಳ ಆಸ್ಪತ್ರೆಗೆ ಹೋಗಿ ಜೌಷಧಿ ತಂದಿದ್ದರು. ಸಂಜೆ ಸಹೋದರ ಮಿಥುನ್ ತನ್ನ ದೊಡ್ಡಪ್ಪನ ಮಕ್ಕಳಾದ ವಿವೇಕ್ ಹಾಗೂ ಅಶೋಕ್ ಕುಮಾರ್ ರವರೊಂದಿಗೆ ಮನೆ ಸಮೀಪವಿರುವ ಸರ್ವಿಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದಲ್ಲಿಗೆ ಬಂದ ಚೇತನ್ ನಾನು ಬಂಟ್ವಾಳ ಆಸ್ಪತ್ರೆಯಿಂದ ಔಷಧಿ ತೆಗೆದುಕೊಂಡು ಬಂದಿದ್ದೇನೆ. ನನಗೆ ತುಂಬಾ ಸುಸ್ತು ಅಗುತ್ತಿದೆ ಎಂದು ಹೇಳುತ್ತಾ, ಒಮ್ಮೆಲೆ ವಾಂತಿ ಮಾಡಲು ಪ್ರಾರಂಭಿಸಿದ್ದು, ಕೂಡಲೇ ಅವರ ಸಹೋದರ ಮಿಥುನ್ ಹಾಗೂ ದೊಡ್ಡಪ್ಪನ ಮಕ್ಕಳು ಉಪಚರಿಸಿ ಚಿಕಿತ್ಸೆ ಬಗ್ಗೆ ಮಡಂತ್ಯಾರಿಗೆ ಕರೆ ತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಗುರುವಾಯನಕೆರೆ ಶ್ರೀ ಕೊಡಮಣಿತ್ತಾಯ ದೈವಸ್ಥಾನಅರಮನೆ ಬೆಟ್ಟ:ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ ಶಿಪ್

Suddi Udaya
error: Content is protected !!