23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

ಮಾಲಾಡಿ: ಜ್ವರ ಹಾಗೂ ಕೆಮ್ಮುನಿಂದ ಬಳಲುತ್ತಿದ್ದ ಮಾಲಾಡಿ ಗ್ರಾಮದ ನಿವಾಸಿ ಚೇತನ್ (೨೫ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೨ರಂದು ವರದಿಯಾಗಿದೆ.


ಚೇತನ್ ಅವರು ಸುಮಾರು ೧೦-೧೫ ದಿನಗಳಿಂದ ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿದ್ದು ಈ ಬಗ್ಗೆ ಸ್ಥಳಿಯ ವೈದ್ಯರಿಂದ ಔಷದೋಪಚಾರ ಮಾಡಿದರೂ ಕೂಡಾ ಜ್ವರ ಕಡಿಮೆಯಾಗದೇ ಇದ್ದುದರಿಂದ ನ.೧೨ ರಂದು ಮಧ್ಯಾಹ್ನ ಬಂಟ್ವಾಳ ಆಸ್ಪತ್ರೆಗೆ ಹೋಗಿ ಜೌಷಧಿ ತಂದಿದ್ದರು. ಸಂಜೆ ಸಹೋದರ ಮಿಥುನ್ ತನ್ನ ದೊಡ್ಡಪ್ಪನ ಮಕ್ಕಳಾದ ವಿವೇಕ್ ಹಾಗೂ ಅಶೋಕ್ ಕುಮಾರ್ ರವರೊಂದಿಗೆ ಮನೆ ಸಮೀಪವಿರುವ ಸರ್ವಿಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದಲ್ಲಿಗೆ ಬಂದ ಚೇತನ್ ನಾನು ಬಂಟ್ವಾಳ ಆಸ್ಪತ್ರೆಯಿಂದ ಔಷಧಿ ತೆಗೆದುಕೊಂಡು ಬಂದಿದ್ದೇನೆ. ನನಗೆ ತುಂಬಾ ಸುಸ್ತು ಅಗುತ್ತಿದೆ ಎಂದು ಹೇಳುತ್ತಾ, ಒಮ್ಮೆಲೆ ವಾಂತಿ ಮಾಡಲು ಪ್ರಾರಂಭಿಸಿದ್ದು, ಕೂಡಲೇ ಅವರ ಸಹೋದರ ಮಿಥುನ್ ಹಾಗೂ ದೊಡ್ಡಪ್ಪನ ಮಕ್ಕಳು ಉಪಚರಿಸಿ ಚಿಕಿತ್ಸೆ ಬಗ್ಗೆ ಮಡಂತ್ಯಾರಿಗೆ ಕರೆ ತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಸೆ.22ರಿಂದ ಅ.1: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

Suddi Udaya

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya
error: Content is protected !!