24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

ಸೋಣಂದೂರು : ಪಣಕಜೆ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಪಕ್ಕದ ಮೈದಾನದ ಬದಿಯಲ್ಲಿರುವ ಮಾಲಾಡಿ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಾಹಣೆ ಮಾಡದೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲಾಗುತ್ತಿದೆ.

ಪಣಕಜೆ ಪೇಟೆಯಿಂದ 100 ಮೀಟರ್ ದೂರದಲ್ಲಿರುವ ನೀರಿನ ಘಟಕವು ಯಾರಿಗೂ ಉಪಯೋಗವಾಗದೆ ಸುತ್ತ ಮುತ್ತಲು ಗಿಡ ಗಂಟಿಗಳು ಆವರಿಸಿದೆ ರಾತ್ರಿ ಸಮಯದಲ್ಲಿ ಇದರ ಪಕ್ಕದಲ್ಲಿ ಕಿಡಿಗೇಡಿಗಳು ಕುಳಿತು ಮಧ್ಯ ಸೇವನೆ ಮಾಡಿ ಬಾಟಲಿಗಳಿಂದ ಘಟಕದ ಕಿಟಕಿ ಬಾಗಿಲುಗಳನ್ನು ಪುಡಿ ಮಾಡಲಾಗಿದೆ. ಕೆಲವು ಸಮಯಗಳ ಹಿಂದೆ ಈ ಪರಿಸರದಲ್ಲಿ ರಾತ್ರಿ ಸಮಯದಲ್ಲಿ ಕಳ್ಳರ ಓಡಾಟ ಕಂಡು ಬಂದಿದ್ದು ಸ್ಥಳೀಯ ಮನೆಯವರು ಪೋಲಿಸ್ ಇಲಾಖೆಗೆ ದೂರನ್ನು ನೀಡಿದ್ದು ಇಲಾಖೆಯು ಕಾರ್ಯಾಚರಣೆ ಮಾಡಿದ್ರು ಯಾವುದೇ ಪ್ರಯೋಜನ ಕಂಡಿಲ್ಲ ಸಂಬಂಧಪಟ್ಟ ಇಲಾಖೆಯು ಇತ್ತ ಕಡೆ ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಪಣಕಜೆ ಪೇಟೆಯ ಹೆದ್ದಾರಿಯ ಬದಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಸ್ಥಳಾಂತರಿಸಿ ಮುಂದಿನ ದಿನಗಳಲ್ಲಿ ಉಪಯೋಗವಾಗುವಂತೆ ಮಾಡುವರೇ ಊರವರ ಬೇಡಿಕೆಯಾಗಿದೆ.

Related posts

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya
error: Content is protected !!