July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

ಸೋಣಂದೂರು : ಪಣಕಜೆ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಪಕ್ಕದ ಮೈದಾನದ ಬದಿಯಲ್ಲಿರುವ ಮಾಲಾಡಿ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಾಹಣೆ ಮಾಡದೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲಾಗುತ್ತಿದೆ.

ಪಣಕಜೆ ಪೇಟೆಯಿಂದ 100 ಮೀಟರ್ ದೂರದಲ್ಲಿರುವ ನೀರಿನ ಘಟಕವು ಯಾರಿಗೂ ಉಪಯೋಗವಾಗದೆ ಸುತ್ತ ಮುತ್ತಲು ಗಿಡ ಗಂಟಿಗಳು ಆವರಿಸಿದೆ ರಾತ್ರಿ ಸಮಯದಲ್ಲಿ ಇದರ ಪಕ್ಕದಲ್ಲಿ ಕಿಡಿಗೇಡಿಗಳು ಕುಳಿತು ಮಧ್ಯ ಸೇವನೆ ಮಾಡಿ ಬಾಟಲಿಗಳಿಂದ ಘಟಕದ ಕಿಟಕಿ ಬಾಗಿಲುಗಳನ್ನು ಪುಡಿ ಮಾಡಲಾಗಿದೆ. ಕೆಲವು ಸಮಯಗಳ ಹಿಂದೆ ಈ ಪರಿಸರದಲ್ಲಿ ರಾತ್ರಿ ಸಮಯದಲ್ಲಿ ಕಳ್ಳರ ಓಡಾಟ ಕಂಡು ಬಂದಿದ್ದು ಸ್ಥಳೀಯ ಮನೆಯವರು ಪೋಲಿಸ್ ಇಲಾಖೆಗೆ ದೂರನ್ನು ನೀಡಿದ್ದು ಇಲಾಖೆಯು ಕಾರ್ಯಾಚರಣೆ ಮಾಡಿದ್ರು ಯಾವುದೇ ಪ್ರಯೋಜನ ಕಂಡಿಲ್ಲ ಸಂಬಂಧಪಟ್ಟ ಇಲಾಖೆಯು ಇತ್ತ ಕಡೆ ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಪಣಕಜೆ ಪೇಟೆಯ ಹೆದ್ದಾರಿಯ ಬದಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಸ್ಥಳಾಂತರಿಸಿ ಮುಂದಿನ ದಿನಗಳಲ್ಲಿ ಉಪಯೋಗವಾಗುವಂತೆ ಮಾಡುವರೇ ಊರವರ ಬೇಡಿಕೆಯಾಗಿದೆ.

Related posts

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!